Advertisement

ಘನತ್ಯಾಜ್ಯ ನಿರ್ವಹಣೆ ಹೊಣೆ ಜಿಪಂ ಸಿಇಒ ಹೆಗಲಿಗೆ

07:04 AM Jun 30, 2019 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಜಿಪಂ ಸಿಇಒ ಆದ್ಯತೆಯಾಗಿ ಪರಿಗಣಿಸಬೇಕು ಮತ್ತು ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Advertisement

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಜಿಪಂ ವ್ಯಾಪ್ತಿಗಳಲ್ಲಿ ಹಸಿತ್ಯಾಜ್ಯ ಮತ್ತು ಒಣತ್ಯಾಜ್ಯ ವಿಂಗಡಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಸೂಕ್ತ ಸ್ಥಳ ಗುರುತಿಸಬೇಕೆಂದು ಸೂಚಿಸಿದರು.

ನರೇಗಾ ಯೋಜನೆಯಡಿ ಹೆಚ್ಚು ಹೆಚ್ಚಾಗಿ ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಒತ್ತು ನೀಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ. ಜಲಾಮೃತ ಯೋಜನೆಯಡಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ. ಜು. 15 ರೊಳಗೆ ವಿವರ ಇಲಾಖೆಗೆ ಸಲ್ಲಿಸಿ ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಕೊಳವೆ ಬಾವಿ ಕೊರೆಸುವಾಗ ಈ ಹಿಂದೆ ಕೊರೆಸಿ ನಿಷ್ಕ್ರಿಯವಾಗಿರುವ ಕೊಳವೆ ಬಾವಿಗಳಿಗೆ ಬಳಸಿರುವ ಪರಿಕರಣಗಳನ್ನು ಮರು ಬಳಕೆ ಸಾಧ್ಯವಿದ್ದರೆ ಮಾಡಿ. ಇಂತಹ ಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಸರಿಸಿ 11.50 ಕೋಟಿ ರೂ. ಉಳಿಸಲಾಗಿದೆ. ಇದನ್ನೇ ಮಾದರಿಯಾಗಿಟ್ಟುಕೊಳ್ಳಿ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next