Advertisement

ಘನ ತ್ಯಾಜ್ಯ ನಿರ್ವಹಣೆ : ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರಿಗೆ ಪ್ರಶಸ್ತಿ

11:08 PM Jun 07, 2019 | Team Udayavani |

ಕಾಪು: ನವೀನ ಮಾದರಿಯ ಯೋಜನೆಗಳ ಅಳವಡಿಕೆಯೊಂದಿಗೆ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಾಡಿರುವ ಶ್ರೇಷ್ಠ ಮಟ್ಟದ ಸಾಧನೆಗಾಗಿ ಕಾಪು ಪುರಸಭೆಯ ಮುಖ್ಯಾಧಿಕಾರಿ ಕೆ. ರಾಯಪ್ಪ ಅವರಿಗೆ ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಶೇಷ ಪ್ರಶಸ್ತಿ ನೀಡಿ, ಗೌರವಿಸಿದೆ.

Advertisement

ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಮ್‌. ಜೋಷಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಿವಿಲ್ ನ್ಯಾಯಾಧೀಶೆ ಕಾವೇರಿ, ಕಾಪು ತಹಶೀಲ್ದಾರ್‌ ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

ಪುರಸಭೆಯ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಯಪ್ಪ ಅವರು ಘನತ್ಯಾಜ್ಯ ನಿರ್ವಹಣೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಬಂದಿದ್ದು, ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಂಗಡಣೆಗೆ ವಿಶೇಷ ಒತ್ತು ಕೊಟ್ಟು ವೈಜ್ಞಾನಿಕ ರೀತಿಯಲ್ಲಿ ಘನ ತ್ಯಾಜ್ಯವನ್ನು ನಿರ್ವಹಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next