Advertisement

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ದೇಹ ಪತ್ತೆ

03:25 PM Dec 20, 2021 | Team Udayavani |

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕು ಸೋಲೂರು ಹೋಬಳಿಯ ಚಿಲುಮೆ ಮಠದ ಸ್ವಾಮೀಜಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಬಸವಲಿಂಗ ಸ್ವಾಮೀಜಿ ಅವರ  ದೇಹ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.

Advertisement

ಭಾನುವಾರ ರಾತ್ರಿ‌ ಮಠಕ್ಕೆ ಹಿಂದಿರುಗಿದ್ದ ಸ್ವಾಮೀಜಿಯವರು  ಸೋಮವಾರ ಬೆಳಿಗ್ಗೆ ಧನುರ್ಮಾಸ ಪೂಜೆ ಹಾಗು ಗದ್ದುಗೆ ಪೂಜೆಯನ್ನೂ ನೆರವೇರಿಸಿದ್ದರು. ಬಳಿಕ ಮಠದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ರಾಮನಗರ ಎಸ್ಪಿ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next