Advertisement
ಹಿರಿಯಡ್ಕ ಪ್ರದೇಶದ ವಿವಿಧ ಕೈಗಾರಿಕಾ ಘಟಕಗಳಿಗೆ ಮತ ಯಾಚನೆಗಾಗಿ ಭೇಟಿ ನೀಡಿದ ವೇಳೆ ಅವರು ಈ ವಿಷಯ ಪ್ರಸ್ತಾಪಿಸಿದರು.
Related Articles
Advertisement
ಬಡವರ ಸಾಲ ಮನ್ನಾ ಮಾಡಿದರೆ, ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸುವವರು, ಶ್ರೀಮಂತರ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುವುದಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಾಗುವುದು ಎಂದು ಹೇಳಿಕೊಂಡು ಗೆದ್ದು ಅಧಿಕಾರಕ್ಕೆ ಬಂದವರು, ಕಳೆದ ಹತ್ತು ವರ್ಷಗಳಲ್ಲಿ ನುಡಿದಂತೆ ನಡೆದಿದ್ದರೆ, ಈವರೆಗೆ ದೇಶದಲ್ಲಿ 20 ಕೋಟಿ ಯುವ ಸಮುದಾಯಕ್ಕೆ ಉದ್ಯೋಗ ಸಿಕ್ಕಿರುತ್ತಿತ್ತು. ವೈಯಕ್ತಿಕವಾಗಿ ಸಾಲ ಮಾಡಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆ. ಆದರೆ ಈಗಿನ ಕಾರ್ಖಾನೆ ಪರಿಸ್ಥಿತಿ ನೋಡಿದರೆ ಬೇಸರವಾಗುತ್ತದೆ. ಅಲ್ಲಿಯ ಗುಜರಿಯನ್ನೂ ಬಿಡದೆ ನಾಶ ಮಾಡಿದರು. ಮುಂದೆ ಅವಕಾಶ ದೊರಕಿದ್ದಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಜಾಗದಲ್ಲಿ ಸಣ್ಣ ಕೈಗಾರಿಕೆಗಳಿಗೆ ಕೈಗಾರಿಕಾ ವಸಾಹತು ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುವುದು ಎಂದು ಜಯಪ್ರಕಾಶ್ ಹೆಗ್ಡೆ ನುಡಿದರು.
ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಎಡೆಬಿಡದೆ ಹೋರಾಟ ಮಾಡುವ ಉತ್ತಮ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಿದೆ. ಜನಪರ ಯೋಜನೆಗಳನ್ನು ರೂಪಿಸಿ ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಹೆಗ್ಡೆ ಶ್ರಮಿಸುತ್ತಾರೆ ಅವರು ಮತ ಕೇಳುವಾಗ ಧರ್ಮ, ಜಾತಿಗಳ ಬಗ್ಗೆ ಮಾತನಾಡದೆ ತನ್ನ ಅಧಿಕಾರದ ಹಾಗೂ ಅಧಿಕಾರ ಇಲ್ಲದ ದಿನಗಳ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು, ಮುಂದೆ ನಾನೇನು ಮಾಡುತ್ತೇನೆ ಎನ್ನುವುದನ್ನು ತಿಳಿಸಿ ಮತ ಯಾಚಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಾವು ಜಯಪ್ರಕಾಶ್ ಹೆಗ್ಡೆ ಅವರನ್ನು ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದರು.