Advertisement

ಶುಲ್ಕ ಪಾವತಿ ಸಮಸ್ಯೆಗೆ ಪರಿಹಾರ ಕಲ್ಪಿಸಿ: ಶೋಭಾ

10:35 PM Sep 25, 2019 | Team Udayavani |

ಬೆಂಗಳೂರು: ಕಾಶ್ಮೀರದಲ್ಲಿ ತಲೆದೋರಿರುವ ಕೆಲ ಸಮಸ್ಯೆ ತಾತ್ಕಾಲಿಕವಾಗಿದ್ದು, ರಾಜ್ಯದ ಕೆಲವು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಹಾಸ್ಟೆಲ್‌ ಶುಲ್ಕ ಪಾವತಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದತಿ ನಂತರ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಅವರ ಪೋಷಕರು ಹಣ ಕಳುಹಿಸಲಾಗದಿದ್ದರಿಂದ ಹಾಸ್ಟೆಲ್‌ ಶುಲ್ಕ ಪಾವತಿಸದೆ ಸಂಕಷ್ಟಕ್ಕೆ ಸಿಲುಕಿದ್ದಾರೆಂಬ ವರದಿಗಳಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಕೇಂದ್ರ ಸರ್ಕಾರ ದೇಶದ ಹಿತದೃಷ್ಟಿಯಿಂದ ಹಾಗೂ ಕಾಶ್ಮೀರದ ಜನರಿಗೆ ಉತ್ತಮ ಭವಿಷ್ಯ ಖಾತರಿಪಡಿಸಲು ಸಂವಿಧಾನದ 370ನೇ ವಿಧಿ ರದ್ದುಪಡಿಸಿ ದಿಟ್ಟ ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಅವರ ಅಮೆರಿಕ ಪ್ರವಾಸದಲ್ಲಿಯೂ ಅನಿವಾಸಿ ಭಾರತೀಯರು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಾಶ್ಮೀರದ ಸರ್ವಾಂಗೀಣ ಅಭಿವೃದ್ಧಿಗೆ ರೂಪಿಸಲಾಗುತ್ತಿರುವ ಯೋಜನೆ ಅನುಷ್ಠಾನಕ್ಕೆ ಬಂದ ನಂತರ ಕಾಶ್ಮೀರದಲ್ಲಿ ಹಿಂದಿನ ವೈಭವ ಮರುಕಳಿಸಲಿದೆ ಎಂಬ ನಂಬಿಕೆ ದೇಶದ ಜನರಲ್ಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next