Advertisement

ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಿ

01:04 PM Jul 20, 2022 | Team Udayavani |

ಶಹಾಪುರ: ಕೃಷಿ ಚಟುವಟಿಕೆಗೆ ಬೇಕಾಗುವ ಸಲಕರಣೆ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳು ಉಂಟಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸರ್ಕಾರಿ ಇಲಾಖೆಗಳ ಪ್ರಮುಖ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಆಗ್ರಹಿಸಿ ಕೃಷಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಮತ್ತು ಆಮ್‌ ಆದ್ಮಿ ಕಾರ್ಯಕರ್ತರು ಜಂಟಿಯಾಗಿ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Advertisement

ತಾಲೂಕಿನಾದ್ಯಂತ ಮುಂಗಾರು ಹಂಗಾಮಿನಲ್ಲಿ ಶೇ.70 ಬೀಜಗಳ ಬಿತ್ತನೆ ಮಾಡಲಾಗಿದೆ. ಆದರೆ ಬೆಳೆಗಳಿಗೆ ಸಮರ್ಪಕ ರಸಗೊಬ್ಬರ, ಕ್ರಿಮಿನಾಶಕ ವಿತರಣೆ ಸೇರಿದಂತೆ ವಿದ್ಯುತ್‌ ಪೂರೈಕೆ ಅಗತ್ಯವಿದ್ದು, ಯಾವುದೇ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಅದರಂತೆಯೇ ಬೆಳೆಗಳಿಗೆ ಕಾಲುವೆ ನೀರು ಹರಿಸಲು ದಿನಕ್ಕೆ 7 ತಾಸು ವಿದ್ಯುತ್‌ ಪೂರೈಸುವಂತೆ ಆಮ್‌ ಆದ್ಮಿ ಮುಖಂಡರು ಒತ್ತಾಯಿಸಿದರು.

ಈ ವೇಳೆ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಹೇಶಗೌಡ ಸುಬೇದಾರ, ಆಮ್‌ ಆದ್ಮಿ ಪಕ್ಷದ ಚಂದ್ರಶೇಖರ ಗುತ್ತೇದಾರ ಸೇರಿದಂತೆ ಇತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next