Advertisement

ಸೋಮಣ್ಣ ನಿವಾಸದಲ್ಲಿ ಅಮಿತ್‌ ಶಾ ಮಹತ್ವದ ಚರ್ಚೆ

09:24 PM Dec 31, 2022 | Team Udayavani |

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅವರು ಸಚಿವ ವಿ.ಸೋಮಣ್ಣ ನಿವಾಸದಲ್ಲಿ ಪ್ರಮುಖ ನಾಯಕರ ಜತೆ ಎರಡು ಗಂಟೆಗಳ ಕಾಲ ಚರ್ಚಿಸಿದ್ದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಅವರೊಂದಿಗೆ ರಾಜ್ಯದಲ್ಲಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು.

Advertisement

ಯಾವ್ಯಾವ ಭಾಗದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಕ್ತಿಯುತವಾಗಿದೆ. ಬಿಜೆಪಿಗೆ ಬರಲು ಬಯಸಿರುವವರು ಮತ್ತು ಅವರ ಷರತ್ತಿನ ಬಗ್ಗೆ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗೆಲುವು ಸಾಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರ ಜತೆ ಮಾತನಾಡಿದರು. ವಿ.ಸೋಮಣ್ಣ ಅವರು ಸಹ ಇದೇ ಸಂದರ್ಭದಲ್ಲಿ ಹಲವು ವಿಚಾರ ತಿಳಿಸಿದರು ಎಂದು ಹೇಳಲಾಗಿದೆ.

ಸೋಮಣ್ಣ ಅವರ ನಿವಾಸದಲ್ಲೇ ಅಮಿತ್‌ ಶಾ ಸಂಜೆ ಇಡ್ಲಿ, ಕೇಸರಿಬಾತ್‌, ಉಪ್ಪಿಟ್ಟು ಹಾಗೂ ಬಜ್ಜಿ ಉಪಾಹಾರ ಸೇವಿಸಿದ್ದು ವಿಶೇಷ. ಬಳಿಕ ಅಮಿತ್‌ ಶಾ ಅವರು ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: ಸವಾಲು ಎದುರಿಸಲು ಪತ್ತೇದಾರಿ ಸಂಸ್ಥೆ ನೆರವು : ಕೇಂದ್ರ ಸಚಿವ ಅಮಿತ್‌ ಶಾ

Advertisement

Udayavani is now on Telegram. Click here to join our channel and stay updated with the latest news.

Next