Advertisement

Politics: ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸೋಮಣ್ಣ?

12:15 AM Nov 18, 2023 | Team Udayavani |

ತುಮಕೂರು: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವಂತೆ ಮಾಜಿ ಸಚಿವ ವಿ. ಸೋಮಣ್ಣ ಅವರು ಸಿದ್ಧಗಂಗಾ ಮಠದಲ್ಲಿ ಗುರುಭವನದ ಉದ್ಘಾಟನೆ ಹೆಸರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಸೋಮಣ್ಣ ಕಣ್ಣಿಟ್ಟಿದ್ದರು. ಆದರೆ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಹಿನ್ನೆಲೆಯಲ್ಲಿ ಮುಖಂಡರ ಮೇಲೆ ಮುನಿಸಿಕೊಂಡಿರುವ ಸೋಮಣ್ಣ, ಡಿ.6ರಂದು ಸಿದ್ಧಗಂಗಾ ಮಠದಲ್ಲಿ ತಾವು ನಿರ್ಮಿಸಿರುವ ಗುರುಭವನ ಉದ್ಘಾಟನೆ ನೆಪ ಮಾಡಿಕೊಂಡು ಲಿಂಗಾಯತರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ವಿಜಯೇಂದ್ರ ಪದಗ್ರಹಣಕ್ಕೂ ಗೈರಾಗಿರುವ ಸೋಮಣ್ಣ ಕಾಂಗ್ರೆಸ್‌ ಸೇರುವುದು ಖಚಿತ ಎನ್ನಲಾಗುತ್ತಿದೆ. ಲಿಂಗಾಯತ ಸಮುದಾಯ ಪಾರು ಪತ್ಯ ಸಾಧಿಸುತ್ತಾ ಬಂದಿರುವ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟು ಸೋಮಣ್ಣ ಕಾಂಗ್ರೆಸ್‌ ಸೇರುವ ಸಾಧ್ಯತೆ ಯಿದೆ. ವಿವಿಧ ಮಠಗಳ ಸ್ವಾಮೀಜಿಗಳು ಶ್ರೀಮಠದಲ್ಲಿ ತಂಗಲು ಅನುಕೂಲ ವಾಗುವಂತೆ ತಮ್ಮ ಚಾರಿಟೆಬಲ್‌ ಟ್ರಸ್ಟ್‌ನಿಂದ ನಿರ್ಮಿಸಿರುವ ನೂತನ ಗುರುಭವನ ಉದ್ಘಾಟನೆಗೆ ಸಚಿವರಾದ ಡಾ| ಜಿ. ಪರಮೇಶ್ವರ್‌, ಕೆ.ಎನ್‌.ರಾಜಣ್ಣ ಅವರನ್ನು ಆಹ್ವಾನಿಸಿರುವುದು ಸೋಮಣ್ಣ ಮುಂದಿನ ರಾಜಕೀಯ ನಡೆಗಳ ಬಗ್ಗೆ ವಿವಿಧ ಚರ್ಚೆಗಳಿಗೆ ಆಸ್ಪದ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next