Advertisement

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಸೋಮಶೇಖರ್‌ ಮಾತುಕತೆ

12:19 PM May 10, 2017 | Team Udayavani |

ಪಿರಿಯಾಪಟ್ಟಣ: ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಕೆ.ಎನ್‌.ಸೋಮಶೇಖರ್‌ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೊಂದಿಗೆ ಮಾತುಕತೆ ನಡೆಸಿದ್ದು  ಪಕ್ಷ ಸಂಘಟನೆಯ ಬಗ್ಗೆ ಸಕಾರಾತ್ಮಕ ಭರವಸೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಪಿರಿಯಾಪಟ್ಟಣದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾತುಕತೆ ನಡೆಸಿದ ಕೆ.ಎನ್‌.ಸೋಮಶೇಖರ್‌, ಪರಿಸರ ಕಾಳಜಿಯ ಕೆಲಸಗಳನ್ನು ಮಾಜಿ ಪ್ರಧಾನಿಗಳು ಪ್ರಶಂಶಿಸಿದ್ದಾರೆ. ಅಲ್ಲದೆ ತಾಲೂಕಿನ ಪ್ರಸ್ತುತ ಜೆಡಿಎಸ್‌ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹಾಗೂ ರೈತರ ಪರವಾದ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿ ಮತ್ತು ಸಾಧ್ಯವಾದರೆ ಅಂತಹ ಕಾರ್ಯಕ್ರಗಳಿಗೆ ತಾವು ಆಗಿಮಿಸುವುದಾಗಿ ತಿಳಿಸಿ ಪ್ರೋತ್ಸಾಹ ನೀಡಿದ್ಧಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆ.ಎನ್‌.ಸೋಮಶೇಖರ್‌, ಎಚ್‌.ಡಿ.ದೇವೇಗೌಡರ ಅಭಿಮಾನಿಯಾಗಿ ಅವರ ಹೋರಾಟದಿಂದ ಸ್ಪೂರ್ತಿ ಪಡೆದಿರುವ ನಾನು ಜೆಡಿಎಸ್‌ ಪಕ್ಷದಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ ಹೆಚ್ಚಾದ ಹಿನ್ನೆಲೆ ಜೆಡಿಎಸ್‌ ವರಿಷ್ಠರನ್ನು ಭೇಟಿ ಮಾಡಿ ಎಲ್ಲಾ ವಿಚಾರಗಳನ್ನು ತಿಳಿಸಿದ್ದು.

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ರಾಷ್ಟ್ರೀಯ ಅಧ್ಯಕ್ಷರು ತಾಲೂಕಿನಲ್ಲಿ ಉತ್ತಮ ಕೆಲಸಗಳನ್ನು ಮಾಡುವಂತೆ ಸೂಚಿಸಿ ದ್ದಾರೆ. ಚುನಾವಣೆಯ ಸಮಯ ಬಂದಾಗ ಪಕ್ಷದ ವತಿಯಿಂದ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ಧಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next