Advertisement

ಕನ್ನಡದ ಹೆಸರಲ್ಲಿ ಕೆಲವರು ರೋಲ್ ಕಾಲ್ ಮಾಡುತ್ತಿದ್ದಾರೆ: ಅರವಿಂದ ಬೆಲ್ಲದ

02:37 PM Nov 24, 2020 | keerthan |

ಹುಬ್ಬಳ್ಳಿ: ವಾಟಾಳ ನಾಗರಾಜ ಅವರಂತವರಿಗೆ ರಾಜಕೀಯ ನೆಲೆ ಇಲ್ಲದಂತಾಗಿದೆ. ಹೀಗಾಗಿ ಸದಾ ಸುದ್ದಿಯಲ್ಲಿರಬೇಕು ಎಂದು ಬಯಸುತ್ತಾರೆ. ಕನ್ನಡದ ಹೆಸರಲ್ಲಿ ಕೆಲ ಮುಖಂಡರು ರೋಲ್ ಕಾಲ್ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮಾದ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗಿದೆ. ಇದರಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಮರಾಠ ಸಮಾಜದ ಕೊಡುಗೆ ರಾಜ್ಯಕ್ಕೆ ದೊಡ್ಡದಿದೆ. ಇದನ್ನು ಪರಿಗಣಿಸಿ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಾರೆ ಎಂದರು.

ಇದನ್ನೂ ಓದಿ:ಸಂಪುಟ ರಚನೆಯೋ ಅಥವಾ ಪುನಾರಚನೆಯೋ ಕಾದು ನೋಡಿ : ನಳಿನ್ ಕುಮಾರ್ ಕಟೀಲ್

ಈಗ ಕನ್ನಡದ ಹೆಸರಲ್ಲಿ ವಿರೋಧ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬೇರೆ ಕಡೆಯಿಂದ ಬಂದವರಿಗೆ ಕನ್ನಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇಂತಹ ಹಲವು ಘಟನೆಗಳು ನಡೆದಿವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next