Advertisement

ಕೆಲ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಇಲ್ಲ; ಗೋವಾ ಸಿಎಂ ಸಾವಂತ್

04:49 PM Oct 07, 2021 | Team Udayavani |

ಪಣಜಿ: ಬಿಜೆಪಿಯ ಕೆಲ ಶಾಸಕರಿಗೆ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸ್ಫರ್ಧಿಸಲು ಟಿಕೇಟ್ ಲಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿಕೆ ನೀಡಿದ್ದಾರೆ.

Advertisement

ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಇದರಿಂದಾಗಿ ಎಲ್ಲ ನಿರ್ಣಯವನ್ನು ಕೇಂದ್ರ ಮಟ್ಟದಲ್ಲಿಯೇ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಿಂದ ಕೇವಲ ಶಿಫಾರಸ್ಸು ಮಾಡಲಾಗುತ್ತದೆ. ಹಾಲಿ ಶಾಸಕರಿಗೆಲ್ಲ ಚುನಾವಣೆಗೆ ಸ್ಫರ್ಧಿಸಲು ಟಿಕೇಟ್ ನೀಡಲೇಬೇಕು ಎಂದಿಲ್ಲ. ಬಿಜೆಪಿ ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಿದೆ. ಇದರಿಂದಾಗಿ ಕೆಲ ಬದಲಾವಣೆಗಳನ್ನು ಮಾಡಲೇಬೇಕಾಗುತ್ತದೆ. ಸದ್ಯ ಯಾರು ಶಾಸಕರಿದ್ದಾರೋ ಅವರಿಗೆಲ್ಲ ಮತ್ತೆ ಚುನಾವಣೆಗೆ ಸ್ಫರ್ಧಿಸಲು ಅವಕಾಶ ಲಭಿಸಲಿದೆ ಎಂದು ಹೇಳಲು ಸಾಧ್ಯವಿಲ್ಲ. ಈ ಕುರಿತು ಸಂಸದೀಯ ಮಂಡಳಿ ಅಂತಿಮ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಈ ಹೇಳಿಕೆಯು ರಾಜ್ಯ ಬಿಜೆಪಿ ಶಾಸಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದ್ದು. ತಾವು ಹಾಲಿ ಶಾಸಕರಾಗಿದ್ದರೂ ಕೂಡ ಮತ್ತೆ ಚುನಾವಣೆಗೆ ಸ್ಫರ್ಧಿಸಲು ಅವಕಾಶ ಲಭಿಸುವುದು ಸದ್ಯಕ್ಕೆ ಖಾತ್ರಿ ಇಲ್ಲ ಎಂಬಂತಾಗಿದೆ.

ಗೋವಾ ದಲ್ಲಿ ಮತ್ತೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಏರಲು ಬಿಜೆಪಿ ರಣತಂತ್ರಗಳನ್ನು ಈಗಾಗಲೇ ಆರಂಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next