Advertisement

ಕೆಲವು ಕಠಿಣ ನಿಯಮಗಳನ್ನು ಮತ್ತೆ ಜಾರಿ ಮಾಡಬೇಕಾಗಬಹುದು: ಗೌರವ್ ಗುಪ್ತಾ

01:06 PM Dec 03, 2021 | Team Udayavani |

ಬೆಂಗಳೂರು: ಹೊಸ ಕೋವಿಡ್ ರೂಪಾಂತರಿ ಒಮಿಕ್ರಾನ್ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಇದರ ನಿಯಂತ್ರಣಕ್ಕೆ ಕಠಿಣ ನಿಯಮ ಪಾಲನೆ ಅಗತ್ಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮಂಜಾಗೃತಾ ಕ್ರಮಗಳನ್ನು ವಹಿಸಬೇಕು. ದೈಹಿಕ ಅಂತರ ಪಾಲಿಸಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಒಮಿಕ್ರಾನ್ ವೈರಸ್ ತಡೆಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ. ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಒಮಿಕ್ರಾನ್ ತಡೆಗೆ ಕಠಿಣ ರೂಲ್ಸ್ ಜಾರಿ ಮಾಡುವಂತೆ ಮನವಿ ಮಾಡಲಾಗುವುದು. ಕೆಲ ದಿನಗಳ ಹಿಂದೆ ತೆರವುಗೊಳಿಸಿದ್ದ ರೂಲ್ಸ್ ಮತ್ತೆ ಜಾರಿ ಮಾಡಲಾಗುವುದು ಎಂದು ಅವರು ಸುಳಿವು ಕೊಟ್ಟಿದ್ದಾರೆ.

ಇದನ್ನೂ ಓದಿ:ಒಮಿಕ್ರಾನ್ ವಿಚಾರದಲ್ಲೂ ಲಂಚ ಹೊಡೆಯುವುದನ್ನು ಸರಕಾರ ಬಿಡಬೇಕು : ಡಿಕೆಶಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next