Advertisement

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

12:50 AM Jun 02, 2023 | Team Udayavani |

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಮೂವರು ವಿದ್ಯಾರ್ಥಿನಿ ಯರೊಂದಿಗೆ ಆಗಮಿಸಿದ ಅನ್ಯ ಕೋಮಿನ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್‌ ಗಿರಿ ನಡೆಸಿದ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಗುರುವಾರ ಸಂಜೆ ವೇಳೆ ನಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ವಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next