Advertisement
ಸೋಮೇಶ್ವರ ಪುರಸಭಾ ಅಧ್ಯಕ್ಷ ರಾಜೇಶ್ ಎ. ಉಚ್ಚಿಲ್ ಅವರು ಕಂಟೋನ್ಮೆಂಟ್ ಝೋನ್ನ ತೆರವು ಕಾರ್ಯಕ್ಕೆ ಚಾಲನೆ ನೀಡಿದರು. ಸೀಲ್ಡೌನ್ ತೆರವಿನ ವೇಳೆ ಪೊಲೀಸ್, ಆರೋಗ್ಯ ಇಲಾಖೆ ಸಿಬಂದಿ, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ. ವಿ.ಆಳ್ವ, ಉಳ್ಳಾಲ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಜಿ.ಪಂ. ಸದಸ್ಯೆ ಧನಲಕ್ಷ್ಮಿ ಗಟ್ಟಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್, ಗ್ರಾ.ಪಂ. ಸದಸ್ಯರಾದ ಪುರುಷೋತ್ತಮ್, ಗಂಗಾಧರ ಗಟ್ಟಿ, ರಮೇಶ್, ದೀಪಕ್ ಪಿಲಾರ್ ಇದ್ದರು.ಪಿಲಾರು ದಾರಂದ ಬಾಗಿಲಿನ ಸೊಂಕಿತ ಮಹಿಳೆಯ 19 ವರ್ಷದ ಪುತ್ರಿಯ ಆನಾರೋಗ್ಯದ ಹಿನ್ನಲೆಯಲ್ಲಿ ನಗರದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದಿದ್ದ ಆಸ್ಪತ್ರೆ ಕೊರೊನ ಸೋಂಕಿನ ಪ್ರದೇಶವಾಗಿದ್ದರಿಂದ ಸೀಲ್ಡೌನ್ ಆಗಿತ್ತು.