Advertisement

ಹಿಜಾಬ್ ವಿವಾದದ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ: ಆರಗ ಜ್ಞಾನೇಂದ್ರ

02:13 PM Feb 07, 2022 | Team Udayavani |

ಶಿವಮೊಗ್ಗ: ಹಿಜಾಬ್ ಬಗ್ಗೆ ಯಾವಾಗಲೂ ಇಲ್ಲದಿರುವ ಒಲವು ಈಗ ಬಂದಿದೆ. ಕಡ್ಡಾಯವಾಗಿ ನಾವು ಹಿಜಾಬ್ ಧರಿಸಿಬರುತ್ತೇವೆ. ಇಲ್ಲದಿದ್ದರೆ ಕಾಲೇಜು ಬಿಡುತ್ತೇವೆ ಎನ್ನುತ್ತಿದ್ದಾರೆ. ಯಾವಾಗಲೂ ಮಕ್ಕಳು ಹೀಗೆ ಹೇಳುತ್ತಿರಲಿಲ್ಲ. ಇದರ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ಬರುತ್ತಿದೆ. ಇದರ ಹಿಂದೆ ಯಾರಿದ್ದಾರೆಂಬ ಬಗ್ಗೆ ತನಿಖೆ ನಡೆಸಬೇಕೆಂದು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ಸಾಧ್ಯವಿಲ್ಲ. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದರು.

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ. ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಲಾಗುವುದಿಲ್ಲ. ಧರ್ಮವನ್ನು ಮೀರಿ ಭಾರತ ಮಾತೆಯ ಮಕ್ಕಳು ನಾವೆಲ್ಲ ಒಂದೇ ಎಂಬ ಭಾವನೆ ನಿರ್ಮಾಣವಾಗಬೇಕು. ಇಂಥ ಸಂಸ್ಕಾರ ಸಿಗುವ ಒಂದೇ ಒಂದು ವೇದಿಕೆ ಶಾಲೆ ಮತ್ತು ಕಾಲೇಜುಗಳು. ಸಮವಸ್ತ್ರ ಸಮಾನತೆಯ ಸಂಕೇತ, ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಕೆಲಸ ಆಗಬೇಕು ಎಂದರು.

ಇದನ್ನೂ ಓದಿ:ಹಿಜಾಬ್-ಕೇಸರಿ ಶಾಲು ವಿವಾದ ನಡುವೆ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

ಕಾಲೇಜುಗಳ ಆಡಳಿತ ಮಂಡಳಿಗೆ ಎಲ್ಲ ರೀತಿಯ ಪೊಲೀಸ್ ರಕ್ಷಣೆ ನೀಡುವಂತೆ ಸೂಚಿಸಿದ್ದೇನೆ. ಕೆಲ ತಿಂಗಳಲ್ಲೇ ಪರೀಕ್ಷೆ ಆರಂಭವಾಗಲಿದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು ಎಂದು ಗೃಹ ಸಚಿವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next