Advertisement

ರಾಜ್ಯದ ಕೆಲವೆಡೆ ಮಳೆ

12:55 AM Feb 09, 2019 | Team Udayavani |

ಬೆಂಗಳೂರು: ಶುಕ್ರವಾರ ಮುಂಜಾನೆ 8. 30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಯಿತು. ಹಾಸನ, ಬೇಲೂರಿನಲ್ಲಿ ತಲಾ 2 ಸೆಂ. ಮೀ. ಮತ್ತು ಸುಬ್ರಹ್ಮಣ್ಯದಲ್ಲಿ ಒಂದು ಸೆಂ. ಮೀ. ಮಳೆ ಸುರಿಯಿತು.

Advertisement

ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕರಾವಳಿಯ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ತಾಪಮಾನ ಕಡಿಮೆಯಾಗಿದ್ದರೆ ಉತ್ತರ ಒಳನಾಡಿನಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬರಲಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆ, ದಕ್ಷಿಣ ಒಳನಾಡಿನ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿದ್ದರೆ ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಬೆಳಗಾವಿ ವಿ. ನಿಲ್ದಾಣದಲ್ಲಿ ಕನಿಷ್ಠ 13 ಡಿ. ಸೆ. ತಾಪಮಾನ ದಾಖಲಾಯಿತು.

ರವಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ 

Advertisement

Udayavani is now on Telegram. Click here to join our channel and stay updated with the latest news.

Next