Advertisement

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

09:10 AM Oct 22, 2021 | Team Udayavani |

ಮೈಸೂರು: ಮೈಸೂರಿನ ಹೊರವಲಯದಲ್ಲಿ ಜೋಡಿ ಕೊಲೆಯಾಗಿದೆ. ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿ ಕೊಲೆ ನಡೆದ ಘಟನೆ ಮೈಸೂರಿನ ಶ್ರೀನಗರದಲ್ಲಿ ನಡೆದಿದೆ.

Advertisement

ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಮತ್ತು ಶ್ರೀನಗರದ ನಿವಾಸಿ ಲತಾ (48) ಕೊಲೆಯಾದವರು. ಕೊಲೆಗೈದ ಆರೋಪಿ ಸಾಗರ್ ನಾಪತ್ತೆಯಾಗಿದ್ದಾನೆ.

ಲತಾ ಮನೆಗೆ ನುಗ್ಗಿದ್ದ ಸಾಗರ್ ಮಚ್ಚಿನಿಂದ ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಮೊದಲು ತಂದೆಯನ್ನು ಕೊಲೆ ಮಾಡಿದ ಸಾಗರ್ ನಂತರ ಲತಾಳಿಗೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ.

ಇದನ್ನೂ ಓದಿ:ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಲತಾ ಮೇಲೆ ಹಲ್ಲೆಗೆ ನಡೆಸುವಾಗ ಲತಾ ಪುತ್ರ ನಾಗಾರ್ಜುನ ತಡೆಯಲು ಬಂದಿದ್ದು, ನಾಗರ್ಜುನನಿಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಗರ್ ನಂತರ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ.

Advertisement

ಗಾಯಗೊಂಡಿರುವ ನಾಗಾರ್ಜುನನನ್ನು ಆಸ್ಪತ್ರೆ ದಾಖಲು ಮಾಡಲಾಗಿದ್ದು, ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next