Advertisement

ಪೌರತ್ವ ಪ್ರತಿಭಟನೆ; ಮೊಸಳೆ ಕಣ್ಣೀರು ಹಾಕುತ್ತಿರೋದು ಯಾಕೆ? ಸೋನಿಯಾಗೆ ನಿರ್ಮಲಾ

09:53 AM Dec 18, 2019 | Team Udayavani |

ನವದೆಹಲಿ: ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಕ್ಕೆ ತಿರುಗೇಟು ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಜಕೀಯ ಲಾಭಕ್ಕಾಗಿ ಸೋನಿಯಾ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಹೇಳಿದರು.

Advertisement

ಬಿಜೆಪಿ ನೇತೃತ್ವದ ಕೇಂದ್ರದ ಮೈತ್ರಿಕೂಟ ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕುವ ನಿಟ್ಟಿನಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೋಮು ಹಿಂಸಾಚಾರವನ್ನು ಎಬ್ಬಿಸುತ್ತಿದೆ ಎಂಬ ಸೋನಿಯಾ ಗಾಂಧಿ ಹೇಳಿಕೆಗೆ ನಿರ್ಮಲಾ ಈ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next