Advertisement

ಸೋನಿಯಾ ಮತ್ತೆ ರಾಯ್‌ಬರೇಲಿ ಕ್ಷೇತ್ರದಿಂದ ಕಣಕ್ಕೆ

12:30 AM Feb 20, 2019 | |

ಹೊಸದಿಲ್ಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ವಾದ್ರಾ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಯ್‌ಬರೇಲಿ ಕ್ಷೇತ್ರದಿಂದ ಹಾಲಿ ಸಂಸದೆ ಸೋನಿಯಾ ಗಾಂಧಿ (72)ಅವರೇ ಮತ್ತೆ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ, ತಾಯಿ ಬದಲಿಗೆ ಪುತ್ರಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಕೆಲ ದಿನಗಳ ಹಿಂದಷ್ಟೇ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಅವರೇ ಕಣಕ್ಕೆ ಇಳಿಯಲಿದ್ದಾರೆ. ಅನಾ ರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಪುತ್ರಿಗೆ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್‌ಗಾಗಿ ಚುನಾ ವಣಾ ರಣತಂತ್ರ ಮಾತ್ರ ರೂಪಿಸಲಿದ್ದಾರಷ್ಟೆ ಎಂಬುದು ಅಧಿಕೃತವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next