Advertisement

ಎಚ್‌.ಡಿ.ದೇವೇಗೌಡರ ಜತೆ ಸೋನಿಯಾ ಗಾಂಧಿ ಸಂವಾದ

06:48 AM May 23, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ಹಿನ್ನೆಲೆಯಲ್ಲಿ ದೇಶದ ಜನತೆಯ ಹಿತಾಸಕ್ತಿಗಾಗಿ ಪ್ರತಿಪಕ್ಷಗಳು ಒಗ್ಗೂಡಿ ಹೋರಾಟ ನಡೆಸಬೇಕು. ಕೋವಿಡ್‌ 19 ಸಂಕಷ್ಟದಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸ  ಮಾಡಬೇಕೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಲಹೆ ನೀಡಿದ್ದಾರೆ.

Advertisement

ಕೋವಿಡ್‌ 19 ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕೈಗೊಳ್ಳಬೇಕಿರುವ ತೀರ್ಮಾನ ಹಾಗೂ ರೂಪಿಸಬೇಕಾಗಿರುವ ಕಾರ್ಯಕ್ರಮಗಳ ಕುರಿತು ಕಾಂಗ್ರೆಸ್‌ ಮುಖ್ಯಸ್ಥೆ  ಸೋನಿಯಗಾಂಧಿ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ನಿಮ್ಮ ನೇತೃತ್ವದಲ್ಲಿ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಮ್ಮ ಪಕ್ಷದ ಸಹಮತ ಇದೆ ಎಂದು ಹೇಳಿದರು. ಗುಜರಾತ್‌, ತಮಿಳುನಾಡು, ಮಹಾರಾಷ್ಟ್ರ  ಸೇರಿ ವಿವಿಧ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿದರೆ ಆತಂಕ ಮೂಡಿಸುವಂತಿದೆ.

ಇದು ತಕ್ಷಣಕ್ಕೆ ನಿಲ್ಲುವಂತೆಯೂ ಇಲ್ಲ. ದೇಶದ ಜನತೆ ಹಾಗೂ ಎಲ್ಲ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ, ಎಲ್ಲವನ್ನೂ  ಕೂಲಂಕಶವಾಗಿ ಚರ್ಚಿಸಿ ಪರಿಹಾರೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ನಾವು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಅವರು ದೇವೇಗೌಡರ ಜತೆ ಸಂವಾದದಲ್ಲಿ  ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next