Advertisement

ಸೋನಿಯಾ, ರಾಹುಲ್‌ ಬಣ್ಣ ಬಯಲು: ಶೆಟ್ಟರ್‌

12:30 AM Dec 31, 2018 | Team Udayavani |

ಹುಬ್ಬಳ್ಳಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಕಾಪ್ಟರ್‌ ಹಗರಣದಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಕೇಳಿ ಬಂದಿದ್ದು, ಅವರ ನಿಜವಾದ ಬಣ್ಣ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು. 

Advertisement

ಶನಿವಾರ “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, 70 ವರ್ಷಗಳಿಂದ ದೇಶವನ್ನಾಳಿದ ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರವನ್ನೇ ಮೈಗೂಡಿಸಿಕೊಂಡಿದೆ.

ಈಗ ಬಹಳ ವರ್ಷಗಳ ಪ್ರಯತ್ನದ ನಂತರ ಹಗರಣದ ದಲ್ಲಾಳಿ ಕ್ರಿಶ್ಚಿಯನ್‌ ಮೈಕೆಲ್‌ ದೇಶಕ್ಕೆ ಸಿಕ್ಕಿದ್ದಾನೆ. ಈ ಹಗರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಭಾಗಿಯಾಗಿದ್ದಾರೆಂದು ಆತನೇ ಇಡಿ ಎದುರು ಬಹಿರಂಗ ಪಡಿಸಿದ್ದಾನೆ. ಪ್ರಕರಣದ ಕುರಿತು ತನಿಖೆ ಪಾರದರ್ಶಕವಾಗಿ ನಡೆಯಬೇಕು. ಸೋನಿಯಾ ಮತ್ತು ರಾಹುಲ್‌ ವಿರುದಟಛಿ ಕಾನೂನು ಕ್ರಮ ಕೈಗೊಂಡು, ಎಲ್ಲ ಬಗೆಯ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next