Advertisement

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

03:46 PM Dec 20, 2020 | sudhir |

ಶಿರ್ವ: ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವದೊಂದಿಗೆ ರವಿವಾರ ಷಷ್ಠಿ ಮಹೋತ್ಸವ ಮತ್ತು ರಥೋತ್ಸವ ಸಂಪನ್ನಗೊಂಡಿತು. ಉಡುಪಿ ಪುತ್ತೂರು ವೇ|ಮೂ|ಶ್ರೀಶ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ವೇ|ಮೂ| ವಿಷ್ಣುಮೂರ್ತಿ ಭಟ್‌ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಡಿ. 23 ರಂದು ಶ್ರೀಸುಬ್ರಹ್ಮಣ್ಯ ದೇವರ ಮಹಾ ರಥೋತ್ಸವ ಜರಗಲಿದೆ.

Advertisement

ಡಿ. 19 ರಂದು ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು , ಡಿ. 20ರಂದು ಮುಂಜಾನೆ ಪಂಚಾಮೃತಾಭಿಷೇಕ, ಕಲಶಾಭಿಷೇಕ,ಬಲಿ,ಮಹಾಪೂಜೆ, ಷಷ್ಠಿ ಮಹೋತ್ಸವ ನೆರವೇರಿತು. ಸಂಪ್ರದಾಯದಂತೆ ದೇವರ ಬಲಿಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ಸ್ವಲ್ಪ ದೂರ ಎಳೆಯಲಾಯಿತು. ಕೋವಿಡ್‌ನಿಂದಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಸಂತೆ ವ್ಯಾಪಾರ ಕೂಡಾ ನಡೆಯಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಭಕ್ತರಿಗಾಗಿ ವಿಶೇಷ ಸರತಿಯ ಸಾಲಿನ ವ್ಯವಸ್ಥೆ ಮಾಡಲಾಗಿದ್ದು , ಭಕ್ತರು ದೇವರ ದರ್ಶನ ಪಡೆದರು.

ಇದನ್ನೂ ಓದಿ:ಶಾಲಾರಾಂಭ ಹಿನ್ನೆಲೆಯಲ್ಲಿ ಪಾಲಕ- ಪೋಷಕರ ಸಹಕಾರ ಕೋರಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ, ಮತ್ತು ಭಕ್ತಾಧಿಗಳು,ಗ್ರಾಮಸ್ಥರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next