Advertisement

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

12:54 AM Oct 23, 2024 | Team Udayavani |

ಬೆಂಗಳೂರು: ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನ ವಾದ ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

Advertisement

ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಗಿಂತ ಅತಿ ಹೆಚ್ಚು ದಕ್ಷತೆಯನ್ನು ಹೊಂದಿದ್ದು, ಸುಮಾರು 2.3 ಕೋಟಿ ಆಂಗ್ಲ ಮತ್ತು ಕನ್ನಡ ಸಮಾನಾಂತರ ವಾಕ್ಯಗಳನ್ನು ಆಧರಿಸಿ ಸಿದ್ಧಗೊಂಡಿದೆ.

ಈ ತಂತ್ರಾಂಶವು ಲೋಕಾರ್ಪಣೆಗೊಂಡಲ್ಲಿ ತಂತ್ರಜ್ಞಾನ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯದ ಬಹುದೊಡ್ಡ ಕೊಡುಗೆ ನೀಡುವುದರ ಜತೆಗೆ ಖಾಸಗಿ ವಲಯದ ತಂತ್ರಾಂಶಕ್ಕೆ ತೀವ್ರ ಪೈಪೋಟಿ ನೀಡಲಿದೆ ಎಂದಿದ್ದಾರೆ.

200ಕ್ಕೂ ಹೆಚ್ಚು ಪದಕೋಶ/ ನಿಘಂಟುಗಳನ್ನು ಬಳಸಿ ಅತ್ಯಾಧುನಿಕ ಪದಕಣಜ ತಂತ್ರಾಂಶವನ್ನು ರಾಜ್ಯ ಸರಕಾರವು ಸಾರ್ವಜನಿಕ ಬಳಕೆಗೆ ನೀಡಿದ್ದು, ಸುಮಾರು 2.20 ಕ್ಷ ಕನ್ನಡ ಪದಗಳು ಹಾಗೂ 1.20 ಲಕ್ಷ ಆಂಗ್ಲ ಮೂಲ ಪದಗಳು ಈ ತಂತ್ರಾಂಶದಲ್ಲಿ ಲಭ್ಯವಿದೆ. ಪದಕಣಜ ಮೊಬೈಲ್‌ ತಂತ್ರಾಂಶವನ್ನು ಸಹ ಬಳಕೆಗೆ ನೀಡಲಾಗಿದೆ ಎಂದರು.

ಇ-ಕಲಿಕಾ ಕನ್ನಡ ಪೋರ್ಟಲ್‌
ಜಗತ್ತಿನ ಬೇರೆ ಭಾಗಗಳಿಂದ ಉದ್ಯೋಗ, ವ್ಯವಹಾರದ ಉದ್ದೇಶದಿಂದ ಇಲ್ಲಿ ನೆಲೆಸಿರುವ ಅನ್ಯಭಾಷಿಕರಿಗೆ, ಕನ್ನಡ ಕಲಿಯಲು ಉತ್ಸಾಹ ಇರುವವರಿಗೆ ಅಂತರ್ಜಾಲದ ಮೂಲಕ ಕನ್ನಡ ಕಲಿಸುವ ಉದ್ದೇಶದಿಂದ ಸರಕಾರವು ಇ-ಕಲಿಕಾ ಕನ್ನಡ ಪೊರ್ಟಲ್‌ ರೂಪಿಸಿದ್ದು, ಇದು ಪ್ರಾಧಿಕಾರದ ಆಶಯಕ್ಕೆ ಪೂರಕವಾಗಿದೆ. ಕನ್ನಡೇತರರು ಕನ್ನಡ ಭಾಷೆಯನ್ನು ಕಲಿಯುವಲ್ಲಿ ಇ-ಕಲಿಕಾ ಕನ್ನಡ ಪೋಟರ್ಲ್ ನಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಡಾ| ಬಿಳಿಮಲೆ ತಿಳಿಸಿದರು.

Advertisement

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ| ಸಂತೋಷ ಹಾನಗಲ್ಲ, ಇ-ಕನ್ನಡ ಯೋಜನೆಯ ಯೋಜನ ನಿರ್ದೇಶಕಿ ನಂದಿನಿ ಪಿ.ಎಂ. ಹಾಗೂ ಅಧಿಕಾರಿ, ಸಿಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next