Advertisement

ಕೋವಿಡ್ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಬಳಸಿ

05:53 PM Jun 19, 2020 | Naveen |

ಸೊರಬ: ಕೋವಿಡ್ ಸೊಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅಂತರ ಕಾಯ್ದುಕೊಳ್ಳುವ ಜೊತೆಗೆ ಜನತೆ ಕಡ್ಡಾಯವಾಗಿ ಮಾಸ್ಕ್ ಬಳಸಬೇಕು ಎಂದು ಶಾಸಕ ಎಸ್‌. ಕುಮಾರ್‌ ಬಂಗಾರಪ್ಪ ಕರೆ ನೀಡಿದರು.

Advertisement

ಪಟ್ಟಣ ತಾಲೂಕು ಕಚೇರಿ ಮುಂಭಾಗ ಗುರುವಾರ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಮಾಸ್ಕ್ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಹಾಗೂ ಪಟ್ಟಣದಲ್ಲಿರುವ ಕಚೇರಿಗಳ ಮುಂಭಾಗದಲ್ಲಿ ಮಾಸ್ಕ್ ಧರಿಸಿ ಸಾರ್ವಜನಿಕರು ಪ್ರವೇಶಿಸಬೇಕೆಂಬ ನಾಮಫಲಕಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಪಿಐ ಆರ್‌.ಡಿ. ಮರುಳುಸಿದ್ದಪ್ಪ ಮಾತನಾಡಿದರು. ತಹಶೀಲ್ದಾರ್‌ ನಫೀಸಾ ಬೇಗಂ, ಇಒ ನಂದಿನಿ, ಸಿಡಿಪಿಒ ಇಂದಿರಾ, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್‌, ಟಿಎಚ್‌ಒ ಡಾ| ಅಕ್ಷತಾ ವಿ. ಖಾನಾಪುರ, ಪಿಎಸ್‌ಐ ಟಿ.ಬಿ. ಪ್ರಶಾಂತ್‌ಕುಮಾರ್‌, ಪಪಂ ಮುಖ್ಯಾಧಿಕಾರಿ ಜಗದೀಶ್‌ ನಾಯ್ಕ, ಆರೋಗ್ಯ ಶಿಕ್ಷಣಾ ಧಿಕಾರಿ ಅರುಂಧತಿ ಕಾಳೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next