Advertisement

ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

09:27 PM Apr 28, 2022 | Team Udayavani |

ಸೊರಬ: ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ.

Advertisement

ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ತೆರಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೃತ ಯುವರಾಜ್ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ : ಕುಪ್ವಾರ: ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡುತ್ತಿದ್ದ 3 ಉಗ್ರಗಾಮಿ ಸಹಚರರ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next