Advertisement

ಹೊಲದಲ್ಲೇ ಕೊಳೆಯುತ್ತಿರುವ ಅನಾನಸ್‌ - ಪರಿಶೀಲನೆ

05:33 PM Apr 08, 2020 | Naveen |

ಸೊರಬ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕಿನ ನೂರಾರು ರೈತರು ಬೆಳೆದಿರುವ ಅನಾನಸ್‌ ಬೆಳೆ ಸೂಕ್ತ ಮಾರುಕಟ್ಟೆ ಇಲ್ಲದೇ ಹೊಲದಲ್ಲಿಯೇ ಕೊಳೆಯುತ್ತಿರುವುದನ್ನು ಜಿಲ್ಲಾ ಧಿಕಾರಿ ಕೆ.ಎಂ. ಶಿವಕುಮಾರ್‌ ಪರಿಶೀಲಿಸಿದರು.

Advertisement

ತಾಲೂಕಿನ ಕಡಸೂರು, ಕೋಣನಮನೆ ಗ್ರಾಮದ ರೈತರ ಹೊಲಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ಕಟಾವು ಮಾಡಲು ಹಾಗೂ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರಿಗೆ ತೊಂದರೆಯಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆ ಕೊಳೆಯುತ್ತಿರುವುದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಹಾಗಾಗಿ, ಬೆಳೆ ನಷ್ಟದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತೋಟಗಾರಿಕಾ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಇದೇ ವೇಳೆ ತಾಲೂಕಿನ ರೈತರು ಎಷ್ಟು ಹೆಕ್ಟೇರ್‌ ಪ್ರದೇಶದಲ್ಲಿ ಅನಾನಸ್‌ ಬೆಳೆದಿದ್ದಾರೆ ಎಂಬ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದರು. ಶಿವಮೊಗ್ಗ ತೋಟಗಾರಿಕಾ ಉಪ ನಿರ್ದೇಶಕ ಡಾ| ಯೋಗೇಶ್‌, ಸೋಮಶೇಖರ್‌, ಡಾ| ಅಕ್ಷತಾ, ಲಲಿತಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next