Advertisement

ವಾರದಲ್ಲಿ 3 ದಿನ ತರಕಾರಿ ಮಾರುಕಟ್ಟೆ: ತಹಶೀಲ್ದಾರ್‌

04:12 PM Apr 08, 2020 | Naveen |

ಸೊರಬ: ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಗುಂಪುಗೂಡುವುದನ್ನು ತಡೆಗಟ್ಟಲು ತಾಲೂಕಿನಾದ್ಯಂತ ವಾರದಲ್ಲಿ ಮೂರು ದಿನ ಮಾತ್ರ ತರಕಾರಿ ಮಾರುಕಟ್ಟೆ ತೆರೆಯಲಾಗುವುದು ಎಂದು ತಹಶೀಲ್ದಾರ್‌ ಪಟ್ಟರಾಜಗೌಡ ಹೇಳಿದರು.

Advertisement

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ನಿತ್ಯ ತರಕಾರಿ ವಹಿವಾಟಿಗೆ ಅವಕಾಶ ಕಲ್ಪಿಸಿರುವುದರಿಂದ ಸಾಕಷ್ಟು ಜನ ಅನಾವಶ್ಯಕವಾಗಿ ಆಗಮಿಸುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ಮಂಗಳವಾರ, ಗುರುವಾರ ಮತ್ತು ಶನಿವಾರ ಮಾತ್ರ ತರಕಾರಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು. ಪಪಂ ವ್ಯಾಪ್ತಿಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವಾಗ ಸಮನ್ವಯ ಸಮಿತಿಯ ಗಮನಕ್ಕೆ ತರಬೇಕೆಂದು ಪಪಂ ಮುಖ್ಯಾಧಿಕಾರಿ ಜಗದೀಶ್‌ ನಾಯ್ಕ ಅವರಿಗೆ ಸೂಚಿಸಿದರು.

ಈ ಹಿಂದಿನಂತೆ ವಾರದಲ್ಲಿ ಮೂರು ದಿನ ಬೆಳಗ್ಗೆ 10 ರಿಂದ 12ರ ವರೆಗೆ ಅಗತ್ಯ ವಸ್ತುಗಳನ್ನು ಕೊಳ್ಳಬಹುದು ಎಂದು ಹೇಳಿದರು. ಸಭೆಯಲ್ಲಿ ಸಿಪಿಐ ಆರ್‌.ಡಿ. ಮರುಳ ಸಿದ್ದಪ್ಪ, ತಾಪಂ ಇಒ ನಂದಿನಿ, ಡಾ| ಅಕ್ಷತಾ ಖಾನಾಪುರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next