Advertisement

Soujanya ಮನೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

12:54 AM Aug 22, 2023 | Team Udayavani |

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯಾ ಮತ್ತು ಅತ್ಯಾಚಾರ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ನಾಗನ ಗೌಡ ಸೋಮವಾರ ಸೌಜನ್ಯಾ ಮನೆಗೆ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿದರು.

Advertisement

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನ್ಯಾಯಕ್ಕೆ ಈಡಾದ ಕುಟುಂಬದ ಪರವಾಗಿ ನಿಲ್ಲುವೆವು. ಅನ್ಯಾಯಕ್ಕೊಳಗಾದವರ ಪರವಾಗಿ ಆಯೋಗದಿಂಂದ ಯಾವೆಲ್ಲ ರೀತಿ ಕಾನೂನು ರೀತಿ ಮುಂದುವರಿಯಲು ಸಾಧ್ಯವಿದೆಯೋ ಎಂಬುದನ್ನು ಎಲ್ಲ ಆಯಾಮಗಳಡಿ ಪರಿಶೀಲಿಸ ಲಾಗುವುದು. ಬಳಿಕ ಸರಕಾರದ ಹಾಗೂ ಸಿಎಂ ಗಮನಕ್ಕೆ ತಂದು ಮನವರಿಕೆ ಮಾಡಲಿದ್ದೇವೆ ಎಂದರು.

ಸರಕಾರಿ ಹುದ್ದೆಗೆ ಶಿಫಾರಸು
ಸೌಜನ್ಯಾಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಿ ಶಿಫಾರಸು ಮಾಡಲಾಗುವುದು ಎಂದರು.

ಬಸ್‌, ಅಂಗನವಾಡಿಗೆ ಯೋಚನೆ
ಕೃತ್ಯ ನಡೆದ ಸ್ಥಳದಲ್ಲಿ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದು, ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯವಾಗಿ ಅಂಗನವಾಡಿ ಕೇಂದ್ರದ ಬೇಡಿಕೆ ಬಗ್ಗೆ ಸೌಜನ್ಯಳ ಮನೆಮಂದಿಗೆ ತಿಳಿಸಿದ್ದಾರೆ. ಬಸ್‌ ವ್ಯವಸ್ಥೆ ಮಾಡುವಂತೆ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್‌ಗೆ ಸೂಚಿಸಿದ್ದೇನೆ ಎಂದರು.

ಘಟನ ಸ್ಥಳಕ್ಕೆ ಭೇಟಿ
ಇದಕ್ಕೂ ಮುನ್ನ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೆ ಭೇಟಿ ನೀಡಿದ ಅವರು ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಟuಲ ಗೌಡರಿಂದ ಮಾಹಿತಿ ಕಲೆ ಹಾಕಿದರು.
ವಿಟ್ಲದಲ್ಲಿ ದೌರ್ಜನ್ಯಕ್ಕೆ ಈಡಾದ ಮಗುವಿಗೆ ನ್ಯಾಯ ಒದಗಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದ ಅವರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

Advertisement

ಸಿಡಿಪಿಒ ಪ್ರಿಯಾ ಆ್ಯಗ್ನೆಸ್‌, ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ, ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್‌ ಠಾಣೆ ಉಪನಿರೀಕ್ಷಕರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತೀ ಗ್ರಾಮದಲ್ಲಿ ಪೋಕ್ಸೋ ಜಾಗೃತಿ
ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ನಾಗನ ಗೌಡ ಅವರು, ಪೋಕ್ಸೋ ಎಂಬ ಗಂಭೀರ ಕಾನೂನಿನ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಅದರ ಶಿಕ್ಷೆಯ ಪ್ರಮಾಣದ ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೈಕ್‌ ಮೂಲಕ ಮೈಕ್‌ನಲ್ಲಿ ಪ್ರಚಾರ ಮಾಡುವಂತೆ ತಹಶೀಲ್ದಾರ್‌ ಮತ್ತು ತಾ.ಪಂ. ಇಒ, ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next