Advertisement

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

09:01 AM Apr 06, 2020 | Nagendra Trasi |

ಜೋಹಾನ್ಸ್ ಬರ್ಗ್:ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾಕ್ಕೆ ವಾಪಸ್ ಮರಳಿದ್ದ ಮುಸ್ಲಿಂ ಮೌಲ್ವಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕುಟುಂಬದ
ಸದಸ್ಯರು ತಿಳಿಸಿರುವುದಾಗಿ ವರದಿ ತಿಳಿಸಿದೆ.

Advertisement

ಮೌಲಾನಾ ಯೂಸೂಫ್ ಟೂಟ್ಲಾ(80ವರ್ಷ) ಎಂಬ ವ್ಯಕ್ತಿ ಮಾರ್ಚ್ 1ರಿಂದ 15ರವರೆಗೆ ನಡೆದ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕು ಹರಡುವ ಕೇಂದ್ರ ಬಿಂದು ಎಂದು ಪರಿಗಣಿಸಲ್ಪಡುವಂತಾಗಿರುವುದಾಗಿ ವರದಿ ವಿವರಿಸಿದೆ.

ಟೂಟ್ಲಾ ಮಂಗಳವಾರ ಸಾವನ್ನಪ್ಪಿದ್ದು, ಇಸ್ಲಾಮಿಕ್ ರುದ್ರಭೂಮಿಯಲ್ಲಿ ಶವದ ಅಂತ್ಯಸಂಸ್ಕಾರ ನೇರವೇರಿಸಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿಯ ನಿಜಾಮುದ್ದೀನ್ ಪ್ರದೇಶ 14ನೇ ಶತಮಾನದ ಸೂಫಿ ಸಂತ ಖ್ವಾಜಾ ನಿಜಾಮುದ್ದೀನ್ ಆಹ್ಲುಲಿಯಾ ದರ್ಗಾವಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next