Advertisement

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

11:01 PM May 18, 2024 | Team Udayavani |

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಶನಿವಾರಕ್ಕೆ ಮುಂದೂಡಿಕೆ ಯಾಗಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಕ್ತಾಯಗೊಂಡಿದ್ದು, 15 ನಾಮಪತ್ರಗಳು ಪುರಸ್ಕೃತಗೊಂಡಿವೆ.

Advertisement

15 ಅಭ್ಯರ್ಥಿಗಳು ಸಲ್ಲಿಸಿದ್ದ 22 ನಾಮಪತ್ರಗಳ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದ 21 ನಾಮಪತ್ರಗಳು ಅಂಗೀಕರಿಸಲ್ಪಟ್ಟಿವೆ.ಪುರಸ್ಕೃತಗೊಂಡಿರುವ 15 ನಾಮ ಪತ್ರಗಳ ಪೈಕಿ 14 ಪುರುಷರು ಮತ್ತು ಒಬ್ಬರು ಮಹಿಳೆಯರಾಗಿದ್ದಾರೆ.

ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರ 26, ಬೆಂಗಳೂರು ಪದವೀಧರ ಕ್ಷೇತ್ರ 16, ನೈಋತ್ಯ ಶಿಕ್ಷಕರ ಕ್ಷೇತ್ರ 9, ನೈಋತ್ಯ ಪದವೀಧರ‌ ಕ್ಷೇತ್ರ 12 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ನಾಮಪತ್ರಗಳು ಸಿಂಧುವಾಗಿವೆ. ಸೋಮವಾರ ನಾಮಪತ್ರ ಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ. 3ರಂದು ಚುನಾವಣೆ ನಡೆಯಲಿದ್ದು, ಜೂ. 6ರಂದು ಮತ ಎಣಿಕೆ ನಡೆಯಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next