Advertisement

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

11:34 PM May 14, 2024 | Team Udayavani |

ಮಂಗಳೂರು: ರಾಷ್ಟ್ರೀಯ ಪಕ್ಷಗಳು ಈ ಬಾರಿ ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಗೆ ಕರಾವಳಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡದೆ ನಿರ್ಲಕ್ಷಿಸಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಧ್ವನಿಯಾಗಿ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸು ತ್ತಿರುವುದಾಗಿ ಮಂಗಳೂರು ವಿ.ವಿ. ಮಾಜಿ ಸಿಂಡಿಕೇಟ್‌ ಸದಸ್ಯ ಎಸ್‌.ಆರ್‌. ಹರೀಶ್‌ ಆಚಾರ್ಯ ಅವರು ಹೇಳಿದ್ದಾರೆ.

Advertisement

ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಆವರು, ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನು ಸರ ಕಾರದ ಮುಂದಿಟ್ಟು ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲು ಮೇ 15ಕ್ಕೆ ನಾಮಪತ್ರ ಸಲ್ಲಿಸುವೆ. ನಾನು ಎಬಿವಿಪಿ, ಸಹಕಾರ ಭಾರತಿ ಹಿನ್ನೆಲೆಯವನು. ಬಂಡಾಯ, ಪಕ್ಷೇತರನಾಗಿ ಸ್ಪರ್ಧಿಸುತ್ತಿಲ್ಲ, ಬದಲಾಗಿ “ಅಭ್ಯರ್ಥಿ’ಯಾಗಿ ಸ್ಪರ್ಧಿಸುತ್ತಿದ್ದೇನೆ. ನನ್ನ ಸ್ಪರ್ಧೆಯ ಕುರಿತು ಬಿಜೆಪಿ ಹಿರಿಯ ಮುಖಂಡರ ಬಳಿ ಈ ಹಿಂದೆ ಹೇಳಿದ್ದೆ ಎಂದರು.

ಈ ಚುನಾವಣೆಯಲ್ಲಿ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಣ ಸಮುದಾಯದ ಮಹತ್ವ ಹಾಗೂ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದ ಆವರು, ಜನಪ್ರತಿನಿಧಿಗಳು ನಮ್ಮ ಕೈಗೆಟಕುವಂತಿದ್ದು, ಜ್ವಲಂತ ಸಮಸ್ಯೆಗಳ ಧ್ವನಿಯಾಗು ವಂತಿರಬೇಕು. ಈ ಬಾರಿ ಬದಲಾವಣೆಯ ಕೂಗು ಕೇಳಿ ಬರುತ್ತಿದೆ. ಸುಮಾರು 20 ವರ್ಷಗಳಿಂದ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಮುದಾಯದ ಹಲವು ಸಮಸ್ಯೆಗಳಿಗೆ ಧ್ವನಿಯಾಗಿ ಹೋರಾಡಿದ್ದೇನೆ. ಈ ಮೂಲಕ ಶಿಕ್ಷಕ ಸಮುದಾಯಕ್ಕೆ ಸೂಕ್ತ ನಾಯಕತ್ವವನ್ನು ನೀಡುವ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು. ಡಾ| ರಾಜಮೋಹನ್‌ ರಾವ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next