Advertisement
2016ರಲ್ಲಿ ತಮಿಳುನಾಡಿನಲ್ಲಿ ನಡೆದ ಸಭೆಯ ನಿರ್ಣಯಗಳ ಕಾರ್ಯ ಪ್ರಗತಿ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ರಾಜ್ಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕುರಿತು ಚರ್ಚಿಸಲಾಗಿದ್ದು, ರಾಜ್ಯಗಳ ಪೊಲೀಸ್ ವ್ಯವಸ್ಥೆ ಆಧುನೀಕರಣ ಕುರಿತಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡಿದ ಹಣವನ್ನು ಪೊಲಿಸ್ ವ್ಯವಸ್ಥೆ ಆಧುನೀಕರಣಕ್ಕೆ ಬಳಸಿಕೊಂಡ ವೆಚ್ಚದ ಪ್ರಮಾಣ ಪತ್ರ ಸಲ್ಲಿಸಿದರೆ, ಕೇಂದ್ರ ಹೆಚ್ಚಿನ ಅನುದಾನ ನೀಡಲಿದೆ ಎಂದು ಹೇಳಿದರು.
ನಡೆಸುವ ಕುರಿತು ಎರಡೂ ರಾಜ್ಯಗಳು ಮಾತುಕತೆ ಮೂಲಕ ಚರ್ಚಿಸಿ ಬಗೆಹರಿಸಿಕೊಳ್ಳಲು ಅವಕಾಶ ಹಾಗೂ ಸಿಗಡಿ ಮೀನಿನಲ್ಲಿ ಆಂಟಿ ಬಯೋಟಿಕ್ ಅಂಶ ಪತ್ತೆಯಾಗಿರುವುದರಿಂದ ಅದನ್ನು ವಿದೇಶಕ್ಕೆ ರಪು¤ ಮಾಡಲು ಸೂಕ್ತ ನಿಯಮ ಜಾರಿಗೆ ತರುವ ಬಗ್ಗೆಯೂ ಸಭೆಯಲ್ಲಿ
ಚರ್ಚೆಯಾಗಿದ್ದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದರು. ಇದೇ ವೇಳೆ, ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳುವುದು ರಾಜ್ಯ ಸರ್ಕಾರದ ಕರ್ತವ್ಯ. ವಿದೇಶಿ ಹಾಗೂ ಸ್ವದೇಶಿ ಪ್ರಜೆಗಳಿದ್ದಾರೆ ಎಂದು ತಿಳಿದುಕೊಳ್ಳು ವುದು ಅಗತ್ಯ ಎಂದು ಹೇಳಿದರು.
Related Articles
ಕೇರಳ ಹಾಗೂ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಕೇಂದ್ರ ತಂಡ ಪರಿಶೀಲನೆ ನಡೆಸಿ ವರದಿ ನೀಡಲಿದೆ. ಕೇಂದ್ರ ಅಗತ್ಯ ನೆರವು ನೀಡುವ ಭರವಸೆ ನೀಡಿದೆ. ಕೇಂದ್ರ ತಂಡದ ವರದಿ ಆಧರಿಸಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ರಾಜನಾಥ ಸಿಂಗ್ ಹೇಳಿದರು. ಇನ್ನು ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಅವರು, ಕೇಂದ್ರಿಯ ತನಿಖಾ ಸಂಸ್ಥೆಗಳು ತಮ್ಮ ಕಾರ್ಯ ನಿರ್ವಹಿಸಲು ಸ್ವತಂತ್ರವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಸುಮ್ಮನೇ ಆರೋಪ ಮಾಡುತ್ತಿದೆ ಎಂದರು.
Advertisement