Advertisement

ಆಸ್ಪತ್ರೆಯಿಂದ ಮನೆಗೆ ಮರಳಲು SPB ಕಾತರರಾಗಿದ್ದಾರೆ: S P ಚರಣ್

07:35 PM Sep 24, 2020 | Hari Prasad |

ಚೆನ್ನೈ: ಕೋವಿಡ್ 19 ಸೋಂಕಿಗೆ ಒಳಗಾಗಿ ಇಲ್ಲಿನ ಎಂ.ಜಿ.ಎಂ. ಹೆಲ್ತ್ ಕೇರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಮತ್ತು ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣುತ್ತಿದೆ.

Advertisement

ತಂದೆಯವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಶೀಘ್ರವೇ ಮನೆಗೆ ಮರಳಲು ಕಾತರರಾಗಿದ್ದಾರೆ ಎಂದು ಅವರ ಪುತ್ರ ಎಸ್.ಪಿ. ಚರಣ್ ಅವರು ತಮ್ಮ ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ ಎಂಬ ಮಾಹಿತಿಯನ್ನೂ ಸಹ ಚರಣ್ ಅವರು ಇದೇ ಸಂಧರ್ಭದಲ್ಲಿ ನೀಡಿದ್ದಾರೆ. ಎಕ್ಮೋ/ಕೃತಕ ಉಸಿರಾಟ, ಪಿಸಿಯೋಥೆರಪಿಗಳನ್ನು ಮುಂದುವರಿಸಲಾಗುತ್ತಿದೆ ಮತ್ತು ಎಸ್.ಪಿ.ಬಿ. ಅವರಿಗೆ ದ್ರವಾಹಾರವನ್ನು ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಅವರ ಪುತ್ರ ನೀಡಿದ್ದಾರೆ.

ಈ ಎಲ್ಲಾ ಚಿಕಿತ್ಸಾ ವಿಧಾನಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿರುವ ತಂದೆಯವರು ಆದಷ್ಟು ಶೀಘ್ರ ಮನೆಗೆ ಮರಳಲು ಕಾತರರಾಗಿದ್ದಾರೆ ಎಂಬುದು ಚರಣ್ ಅವರ ಭರವಸೆಯ ನುಡಿಯಾಗಿದೆ.

Advertisement

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರ ಹಾಡುಗಳನ್ನು ಹಾಡಿರುವ ಎಸ್.ಪಿ.ಬಿ. ಅವರಿಗೆ ಆಗಸ್ಟ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು.

ವೈದ್ಯರ ಸಲಹೆಯಂತೆ ಎಂ.ಜಿ.ಆರ್. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಿ.ಯವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next