Advertisement

ಹೆಡ್‌ ಕಾನ್‌ಸ್ಟೆಬಲ್‌ಗೆ ಎಸ್ಪಿಯಿಂದ ಶ್ಲಾಘನೆ

10:39 PM Jun 13, 2019 | Team Udayavani |

ಹಿರಿಯಡ: ಇಲ್ಲಿನ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಸಂತೋಷ್‌ ಕೆ. ಅವರಿಗೆ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕಿ ನಿಶಾ ಜೇಮ್ಸ್‌ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.

Advertisement

ಸಂತೋಷ್‌ ಕೆ.ಅವರು ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ ಉಪಗಸ್ತು ಸಂಖ್ಯೆ -10 ನೇ ಕಾರ್ಕಳ ತಾಲೂಕಿನ ಕಣಜಾರು ಗ್ರಾಮ ಬೀಟ್‌ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಸದಸ್ಯರಿಗೆ ,ಕಣಜಾರು ಗ್ರಾಮದ ನಾಗರಿಕರಿಗೆ ರಸ್ತೆ ಸುರಕ್ಷತೆ ಸಂಬಂಧ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಡೆಗಟ್ಟುವ
ಬಗ್ಗೆ ಮಾಹಿತಿ, ಮಹಿಳೆಯರ ಸುರಕ್ಷತೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ,ಬೆಲೆ ಬಾಳುವ ವಸ್ತುಗಳ ಸಂರಕ್ಷಣೆ ಮತ್ತು ಅಪರಾಧಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಮತ್ತು ಕಾನೂನು ರೀತಿ ಕ್ರಮ ಕೈಗೊಳ್ಳುವ ಬಗ್ಗೆ ತಿಳುವಳಿಕೆ ನೀಡಿ,ಅರಿವು ಮೂಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುವ ಬಗ್ಗೆ ಅಭಿನಂದನಾ ಪತ್ರದಲ್ಲಿ ಎಸ್ಪಿ ಉಲ್ಲೇಖೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next