Advertisement

ಅಲ್ಲೂರ ಬಿ ಗ್ರಾಮಕ್ಕೆ ಎಸ್‌ಪಿ ಪಂತ್‌ ಭೇಟಿ

11:17 AM Jan 06, 2022 | Team Udayavani |

ಚಿತ್ತಾಪುರ: ತಾಲೂಕಿನ ಅಲ್ಲೂರ (ಬಿ) ಗ್ರಾಮದಲ್ಲಿ ಅಕ್ರಮ ಗಾಂಜಾ ಬೆಳೆ ಬೆಳೆಯುವುದಾಗಲಿ ಅಥವಾ ಮಾರಾಟ ಮಾಡುವುದಾಗಲಿ ಕಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌ ಖಡಕ್‌ ಎಚ್ಚರಿಕೆ ನೀಡಿದರು.

Advertisement

ತಾಲೂಕಿನ ಅಲ್ಲೂರ (ಬಿ) ಗ್ರಾಮಕ್ಕೆ ಭೇಟಿ ಮಾಡಿ ಸಾರ್ವಜನಿಕರ ಸಭೆ ನಡೆಸಿ ಮಾತನಾಡಿದ ಅವರು, ಗಾಂಜಾ ಮಾರಾಟ ಮಾಡುವವರಿಗೆ ಯಾರಾದರೂ ಸಹಕಾರ ನೀಡಿದರೆ ಅವರ ಮೇಲೆಯೂ ಕಾನೂನು ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮದಲ್ಲಿ ಎಲ್ಲಾದರೂ ಅಕ್ರಮ ಗಾಂಜಾ ಬೆಳೆ ಬೆಳೆದಿದ್ದರೆ ಅಥವಾ ಮಾರಾಟ ಮಾಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಪೊಲೀಸ್‌ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಡಿವೈಎಸ್‌ಪಿ ಉಮೇಶ ಚಿಕ್ಕಮಠ, ಸಿಪಿಐ ಕೃಷ್ಣಪ್ಪ ಕಲ್ಲದೇವರು, ಪಿಎಸ್‌ಐ ಗಂಗಮ್ಮ, ಸಿಬ್ಬಂದಿಗಳಾದ ನಾಗೇಂದ್ರ ತಳವಾರ, ಮಹೇಶ ರೆಡ್ಡಿ, ಚಂದ್ರಶೇಖರ, ಅಜರೋದ್ದಿನ್‌, ಮುಖಂಡರಾದ ಶಂಕರ ವಿಜಾಪೂರಕರ್‌, ಮಹಾದೇವ ಕೊನಗೇರಿ, ರಾಮಲಿಂಗ, ದುರ್ಜಿನ ನಾಟೀಕಾರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next