Advertisement

Spandana:ಬ್ಯಾಂಕಾಕ್‌ ನಿಂದ ಬೆಂಗಳೂರಿಗೆ ಸ್ಪಂದನಾ ಪಾರ್ಥೀವ ಶರೀರ, ಅಂತಿಮ ದರ್ಶನಕ್ಕೆ ಅವಕಾಶ

11:25 PM Aug 08, 2023 | Team Udayavani |

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ (ಆಗಸ್ಟ್‌ 08) ತಡರಾತ್ರಿ ರಾತ್ರಿ ಬೆಂಗಳೂರಿಗೆ ತರಲಾಗಿದೆ.

Advertisement

ಇದನ್ನೂ ಓದಿ:Bommai;ಕೇಂದ್ರ ಸಚಿವ ಅಮಿತ್‌ ಶಾ ಭೇಟಿಯಾದ ಬಸವರಾಜ ಬೊಮ್ಮಾಯಿ: ವಿಪಕ್ಷ ಸ್ಥಾನ ಆಯ್ಕೆ ಚರ್ಚೆ

ಬೆಂಗಳೂರಿನಲ್ಲಿರುವ ತಂದೆ ಬಿ.ಕೆ.ಶಿವರಾಮ್‌ ಅವರ ನಿವಾಸದಲ್ಲಿ ಸ್ಪಂದನಾ ಪಾರ್ಥೀವ ಶರೀರ ಇಡಲು ವೇದಿಕೆ ಸಿದ್ಧಪಡಿಸಲಾಗಿದ್ದು, ಸಾರ್ವಜನಿಕರಿಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಬುಧವಾರ ಮಧ್ಯಾಹ್ನ 2ಗಂಟೆವರೆಗೆ ಅವಕಾಶ ನೀಡಲಾಗಿದೆ.

ನಂತರ ಹರಿಶ್ಚಂದ್ರ ಘಾಟ್‌ ನಲ್ಲಿ ಸ್ಪಂದನಾ ಅವರ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಎರಡು ಗೇಟ್‌ ಗಳನ್ನು ನಿರ್ಮಿಸಲಾಗಿದೆ.

ಸ್ಯಾಂಡಲ್‌ ವುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ವಾರದ ಹಿಂದೆ ಸೋದರ ಸಂಬಂಧಿಗಳ ಜೊತೆ ಪ್ರವಾಸಕ್ಕೆಂದು ಥಾಯ್ಲೆಂಡ್‌ ಗೆ ತೆರಳಿದ್ದರು. ನಿಗದಿಯಂತೆ ಅವರು ಭಾನುವಾರ ಬೆಂಗಳೂರಿಗೆ ಮರಳಬೇಕಿತ್ತು. ಆದರೆ ವಿಜಯ್‌ ರಾಘವೇಂದ್ರ ಚಿತ್ರೀಕರಣ ಮುಗಿಸಿಕೊಂಡು ಭಾನುವಾರ ಥಾಯ್ಲೆಂಡ್‌ ನಲ್ಲಿ ಅವರನ್ನು ಸೇರಿಕೊಂಡಿದ್ದರು. ರಾತ್ರಿ ಮಲಗಿದ್ದ ಸ್ಪಂದನಾ ನಿದ್ರಾವಸ್ಥೆಯಲ್ಲಿಯೇ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next