Advertisement

Spandana: ಅಂತಿಮ ವಿದಾಯ- ಸ್ಪಂದನಾ ಪಾರ್ಥೀವ ಶರೀರ ಪಂಚಭೂತಗಳಲ್ಲಿ ಲೀನ

04:41 PM Aug 09, 2023 | Team Udayavani |

ಬೆಂಗಳೂರು: ಇತ್ತೀಚೆಗೆ ಥಾಯ್ಲೆಂಡ್‌ ನಲ್ಲಿ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಬುಧವಾರ (ಆಗಸ್ಟ್‌ 09) ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತಿ, ನಟ ವಿಜಯ್‌ ರಾಘವೇಂದ್ರ, ಮೈದುನ ಶ್ರೀಮುರಳಿ, ಸ್ಪಂದನಾ ಕುಟುಂಬ ಸದಸ್ಯರು ಹಾಜರಿದ್ದರು.

Advertisement

ಇದನ್ನೂ ಓದಿ:Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ

ಮಾಜಿ ಪೊಲೀಸ್‌ ಅಧಿಕಾರಿ ಬಿಕೆ ಶಿವರಾಂ ಅವರ ಮಲ್ಲೇಶ್ವರದ ನಿವಾಸದಿಂದ ಹರಿಶ್ಚಂದ್ರ ಘಾಟ್‌ ವರೆಗೆ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ಯಾತ್ರೆ ಸಾಗಿತು. ಹರಿಶ್ಚಂದ್ರ ಘಾಟ್‌ ನಲ್ಲಿ ಈಡಿಗ ಸಂಪ್ರದಾಯದಂತೆ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಹರಿಶ್ಚಂದ್ರ ಘಾಟ್‌ ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರದ ಕ್ರಿಯೆಯಲ್ಲಿ ಪತಿ ವಿಜಯ್‌ ರಾಘವೇಂದ್ರ ಮತ್ತು ಪುತ್ರ ಶೌರ್ಯ ಅಂತಿಮ ವಿಧಿ-ವಿಧಾನ ಪೂರೈಸಿದ್ದರು.

ಸ್ಪಂದನಾ ತಂದೆ ಬಿಕೆ ಶಿವರಾಮ್‌ ಅವರ ಮಲ್ಲೇಶ್ವರಂ ನಿವಾಸದಲ್ಲಿ ಬುಧವಾರ ಬೆಳಗ್ಗೆಯಿಂದಲೇ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2-30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

Advertisement

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮುಖಂಡ ಮುನಿರತ್ನ, ಸ್ಯಾಂಡಲ್‌ ವುಡ್‌ ನ ರಾಕಿಂಗ್‌ ಸ್ಟಾರ್‌ ಯಶ್‌, ಕ್ರೇಜಿಸ್ಟಾರ್‌ ರವಿಚಂದ್ರನ್‌, ಜಗ್ಗೇಶ್‌, ಧ್ರುವ ಸರ್ಜಾ, ಯುವರಾಜ ಕುಮಾರ, ಅರವಿಂದ್‌ ರಮೇಶ್‌, ದೊಡ್ಡಣ್ಣ, ಉಮಾಶ್ರೀ, ಜಯಮಾಲಾ, ತಬಲಾ ನಾಣಿ, ವಿನೋದ್‌ ರಾಜ್‌, ಹೊನ್ನಾವಳ್ಳಿ ಕೃಷ್ಣ, ಕುಮಾರ್‌ ಬಂಗಾರಪ್ಪ, ರಂಗಾಯಣ ರಘು ಸೇರಿದಂತೆ ನೂರಾರು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next