Advertisement

“ಸುಪ್ರೀಂ ಆದೇಶದ ನಂತರವೇ ಮಾತು’

01:08 AM Jul 12, 2019 | Team Udayavani |

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಶಾಸಕರ ರಾಜೀನಾಮೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆ ಶುಕ್ರವಾರ
ನಡೆಯಲಿದ್ದು, ಸುಪ್ರೀಂಕೋರ್ಟ್‌ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಸಭೆ ನಂತರ ಮಾತನಾಡಿದ ಅವರು, 10 ಮಂದಿ ಶಾಸಕರು ಗುರುವಾರ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಸದ್ಯ ನಾನು ಏನನ್ನೂ ಚರ್ಚಿಸುವುದಿಲ್ಲ. ಸುಪ್ರೀಂಕೋರ್ಟ್‌ ಆದೇಶದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಸ್ಪೀಕರ್‌ ಅವರ ಮಾತಿನ ವೈಖರಿ ಗಮನಿಸಿದರೆ ವರ್ಷಾನುಗಟ್ಟಲೇ ರಾಜೀನಾಮೆ ಅಂಗೀಕರಿಸದಿರುವ ವಿಳಂಬ ಮಾದರಿ ಅನುಸರಿಸಿದಂತಿದೆ. ಸರ್ಕಾರ ಯಾವುದೇ ವಿಧೇಯಕಗಳನ್ನು ಮಂಡಿಸಲು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಸಭಾತ್ಯಾಗ ಮಾಡುವುದಿಲ್ಲ. ಮುಂದಿನ ಹೋರಾಟದ ಬಗ್ಗೆ ಶುಕ್ರವಾರ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಶಾಸಕರ ರಾಜೀನಾಮೆ ಸಂಬಂಧ ಸ್ಪೀಕರ್‌ ಕೂಡಲೇ ಕ್ರಮ ಕೈಗೊಳ್ಳಬೇಕು.ಸುಪ್ರೀಂಕೋರ್ಟ್‌ ಆದೇಶ ಸಂವಿಧಾನ ಬದ್ಧವಾಗಿದೆ ಎಂದು ಹೇಳಿದರು.

ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಶಾಸಕರು ರಾಜೀನಾಮೆ ನೀಡಿದ್ದರೂ ಅದನ್ನು ಅಂಗೀಕರಿಸಲು ಇಷ್ಟೊಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Advertisement

ಅಣುಕು ಪ್ರಮಾಣ ವಚನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗುವುದಕ್ಕೂ ಮೊದಲು ಗುಂಪುಗೂಡಿದ್ದ ಶಾಸಕರು ಬಿಜೆಪಿ ಸರ್ಕಾರ ರಚನೆ ಬಗ್ಗೆಯೇ ಚರ್ಚೆಯಲ್ಲಿ ತೊಡಗಿದ್ದರು. ಕೆಲವರು ಸರ್ಕಾರ ರಚನೆಯಾಗಿದ್ದು, ತಮಗೆ ಇಂಥದ್ದೇ
ಸಚಿವ ಸ್ಥಾನ ಸಿಗಲಿದೆ ಎಂದು ಲಘು ಧಾಟಿಯಲ್ಲಿ ಮಾತಾಡಿಕೊಳ್ಳುತ್ತಿದ್ದರು. ಇನ್ನೂ ಕೆಲವರು, “…..’ಇಂತಹ ಹೆಸರಿನವನಾದ ಎಂಬಂತೆ ಅಣುಕು ಪ್ರಮಾಣ ವಚನ ಸ್ವೀಕಾರ ನಡೆಸಿ ಸಂತಸದಲ್ಲಿದ್ದರು ಎಂದು ಶಾಸಕರೊಬ್ಬರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next