Advertisement

ಶಿರಸಿ: ಪಂಡಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ವಿಧಾನಸಭಾಧ್ಯಕ್ಷ ಕಾಗೇರಿ

12:44 PM Jul 30, 2022 | Team Udayavani |

ಶಿರಸಿ: ಮೇಲ್ದರ್ಜೆಗೇರಿದ ಪಂಡಿತ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶನಿವಾರ ವೀಕ್ಷಿಸಿದರು.

Advertisement

ರಾಯಪ್ಪ ಹುಲೇಕಲ್ ಶಾಲೆ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ತುರ್ತು ಚಿಕಿತ್ಸಾ ಘಟಕದ ಕಟ್ಟಡದ ಕಾಮಗಾರಿ ವೀಕ್ಷಿಸಿದ ಅವರು ಕಾಮಗಾರಿಯ ಮಾಹಿತಿ ಪಡೆದು ಬಳಿಕ ಮಾತನಾಡಿ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಯೋಜನಾಬದ್ಧವಾಗಿ ಕೆಲಸ ನಡೆಯಬೇಕು. ವಿಳಂಬ ಧೋರಣೆ ಅನುಸರಿಸಬಾರದು ಎಂದು ಸೂಚಿಸಿದರು.

ಜಿಲ್ಲೆಗೆ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಯ ಬೇಡಿಕೆ ಇದೆ. ಈಗಾಗಲೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ಜೊತೆ ಚರ್ಚಿಸಲಾಗಿದ್ದು, ಅವರು ವಿಶೇಷ ಪ್ರಕರಣ ಎಂದು ಪರಿಗಣಿಸಿ ಆಸ್ಪತ್ರೆ ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಟ್ರಾಮಾ ಸೆಂಟರ್ ಸ್ಥಾಪನೆಯ ಬೇಡಿಕೆಯೂ ಇದೆ. ಭೌಗೋಳಿಕ ಸ್ಥಿತಿ, ಅಪಘಾತ ಪ್ರಕರಣ, ತುರ್ತು ಚಿಕಿತ್ಸೆಗಳ ಅಂಕಿ-ಸಂಖ್ಯೆಗಳನ್ನು ಆಧಾರವಾಗಿಟ್ಟು ಜಿಲ್ಲೆಯ ಸೂಕ್ತ ಸ್ಥಳದಲ್ಲಿ ಟ್ರಾಮಾ ಸೆಂಟರ್ ನಿರ್ಮಾಣವಾಗಲಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಟ್ಟಾಗಿ ಚರ್ಚಿಸಿ ಆರೋಗ್ಯ ಕ್ಷೇತ್ರ ಸುಧಾರಣೆಗೆ ಕ್ರಮ ವಹಿಸಲಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next