Advertisement

ಬಿಜೆಪಿಗೆ ಸೇರ್ಪಡೆಗೊಂಡಿರುವ  ಜಾಧವ್‌ಗೆ ಸ್ಪೀಕರ್‌ ನೋಟಿಸ್‌

12:30 AM Mar 08, 2019 | |

ಬೆಂಗಳೂರು: ಕಾಂಗ್ರೆಸ್‌ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿರುವ ಉಮೇಶ್‌ ಜಾಧವ್‌ಗೆ ಸ್ಪೀಕರ್‌ ರಮೇಶ್‌ ಕುಮಾರ್‌ ನೋಟಿಸ್‌ ಜಾರಿ ಮಾಡಿದ್ದಾರೆ. 

Advertisement

ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಅನುಮಾನಗಳಿದ್ದು ಅದಕ್ಕೆ  ಸ್ಪಷ್ಟನೆ ಕೋರಿ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಸ್ಪೀಕರ್‌ ಕಚೇರಿ ಮೂಲಗಳು ತಿಳಿಸಿವೆ.

ವಿಪ್‌ ಉಲ್ಲಂಘನೆ ಪ್ರಕರಣದಲ್ಲಿ ಶಾಸಕರಾದ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ನಾಗೇಂದ್ರ ಅವರಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು,  ಮಾ. 12ರಂದು ಸ್ಪೀಕರ್‌ ಮುಂದೆ ಖುದ್ದು ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next