Advertisement

ಸಭಾಪತಿ ಸ್ಥಾನ ಬಿಜೆಪಿಗೋ, ಜೆಡಿಎಸ್‌ಗೋ?

12:11 AM Jan 25, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿರುವು ದರಿಂದ ಆ ಹುದ್ದೆ ಯಾರಿಗೆ ಒಲಿಯುತ್ತದೆ ಎಂಬ ಕುತೂಹಲ ಜೆಡಿಎಸ್‌ ಹಾಗೂ ಬಿಜೆಪಿಯಲ್ಲಿದೆ.

Advertisement

ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸು ತ್ತದೆಯೇ ಎನ್ನುವುದು ಇನ್ನೂ ಖಚಿತ ವಾಗಿಲ್ಲ.  ಜ. 27ರಂದು ಈ ಸಂಬಂಧ  ಬಿಜೆಪಿ ನಾಯಕರು ಸಭೆ ನಡೆಸಲು ನಿರ್ಧರಿಸಿದ್ದಾರೆ.

ಬಿಜೆಪಿಯಲ್ಲಿ ಏನಾಗುತ್ತಿದೆ? :

ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಬಸವರಾಜ್‌ ಹೊರಟ್ಟಿ ಅವರನ್ನು ಮಾಡಲು ಬಿಜೆಪಿ ಬೆಂಬಲ ಸೂಚಿಸುವಂತೆ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರು  ಹೊರಟ್ಟಿ ಬಗ್ಗೆ ಮಾಹಿತಿ ಪಡೆದುಕೊಂಡು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಅಭಿಪ್ರಾಯ ಕೇಳಿದ್ದಾರೆ ಎನ್ನಲಾಗಿದೆ. ನಳಿನ್‌ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಇದರ ಬೆನ್ನಲ್ಲೇ ಬಿಜೆಪಿಯ  ಪರಿಷತ್‌ ಸದಸ್ಯರು ಜ. 27ರಂದು  ಸಂಜೆ  ಸಿಎಂ ಹಾಗೂ  ನಳಿನ್‌  ಜತೆ ಸಭೆ ನಡೆಸಲು ತೀರ್ಮಾನಿಸಿದ್ದು,  ಸಭೆಯಲ್ಲಿ ಸಭಾಪತಿ ಸ್ಥಾನ ಉಳಿಸಿ ಕೊಳ್ಳಬೇಕೆಂಬ ಬೇಡಿಕೆಯನ್ನು ಮುಂದಿ ಡಲು ಬಿಜೆಪಿಗೆ  ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ ಬೆಳವಣಿಗೆ :

Advertisement

ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಗೃಹ  ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಸಹಕಾರ ನೀಡುವಂತೆ ಬಿಜೆಪಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯನ್ನು  ಭೇಟಿ ಮಾಡುವಂತೆ ಬೊಮ್ಮಾಯಿ ಸಲಹೆ ನೀಡಿದ್ದು, ಅದರಂತೆ ಜ. 27ರೊಳಗೆ  ಕುಮಾರಸ್ವಾಮಿ ಅವರು  ಯಡಿಯೂರಪ್ಪರನ್ನು  ಭೇಟಿ ಮಾಡುವ ಸಾಧ್ಯತೆ ಇದೆ.

ಜೆಡಿಎಸ್‌ಗೆ ದೊರೆತರೆ ಮೊದಲ ಸಭಾಪತಿ :

ಜನತಾ ಪರಿವಾರ ಇಬ್ಭಾಗವಾದ ಬಳಿಕ ವಿಧಾನ ಪರಿಷತ್ತಿನಲ್ಲಿ  ಜೆಡಿಎಸ್‌ಗೆ ಇದುವರೆಗೂ ಸಭಾಪತಿ ಸ್ಥಾನ ದೊರೆತಿಲ್ಲ.  ಈಗ ಸಿಕ್ಕಿದರೆ ಅದು ಮೊದಲ ಅವಕಾಶವಾಗಲಿದೆ.

ಎರಡೂ ಪಕ್ಷದ ಹಿರಿಯ ನಾಯಕರು ಚರ್ಚಿಸಿ ಯಾವ ಪಕ್ಷಕ್ಕೆ  ಯಾವ ಹುದ್ದೆ  ನಿಡಬೇಕು ಎನ್ನುವುದನ್ನು  ತೀರ್ಮಾನಿಸುತ್ತಾರೆ. ಪಕ್ಷದ ನಾಯ ಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. -ಮಹಾಂತೇಶ ಕವಟಗಿ ಮಠ, ವಿಧಾನ ಪರಿಷತ್ತಿನಲ್ಲಿ  ಸರಕಾರದ ಮುಖ್ಯ ಸಚೇತಕ

 

Advertisement

Udayavani is now on Telegram. Click here to join our channel and stay updated with the latest news.

Next