Advertisement
ಮೇಕೆದಾಟು ವಿಚಾರಕ್ಕೆ ಸಭೆ: ಅಧಿವೇಶನ ಆರಂಭವಾದಾಗಿನಿಂದಲೂ ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಹಾಗೂ ಡಿಎಂಕೆ ಸಂಸದರು ಪ್ರತಿಭಟನೆ ನಡೆಸುತ್ತಿರುವುದರಿಂದ ಬುಧವಾರ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ವಿವಿಧ ಪಕ್ಷಗಳ ನಾಯಕರ ಸಭೆ ನಡೆಸಿದ್ದಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಎಐಎಡಿಎಂಕೆ ಮತ್ತು ಡಿಎಂಕೆ ಸಂಸದರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಷಯವನ್ನು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂಬುದಾಗಿ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ರಾಜನಾಥ್ ಸಿಂಗ್ ಕೂಡ ಸಭೆಯಲ್ಲಿ ಹಾಜರಿರಲಿದ್ದು, ವಿವಿಧ ಪಕ್ಷಗಳ ಬೇಡಿಕೆ ಆಲಿಸಿ, ಪರಿಹಾರ ಕಂಡುಕೊಳ್ಳಲಿದ್ದಾರೆ.
Advertisement
ಅಸಭ್ಯತೆ: 24 ಎಐಎಡಿಎಂಕೆ ಸಂಸದರ ಅಮಾನತು
12:30 AM Jan 03, 2019 | |
Advertisement
Udayavani is now on Telegram. Click here to join our channel and stay updated with the latest news.