Advertisement

ಸದನಕ್ಕೆ ಬರಲು ಮತ್ತೊಮ್ಮೆ ಮನವಿ: ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ

08:26 PM Feb 20, 2023 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಲು-ಗೆಲುವಿನ ಆಲೋಚನೆಯಲ್ಲಿ ಸದನಕ್ಕೆ ಬಾರದೇ ಇರುವುದು ತಪ್ಪು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

Advertisement

ಸೋಮವಾರ 10.30ಕ್ಕೆ ನಿಗದಿಯಾಗಿದ್ದ ಕಲಾಪ ಕೋರಂ ಆಗದ ಕಾರಣ 11.30ಕ್ಕೆ ಪ್ರಾರಂಭವಾದ್ದರಿಂದ ಸದನದಲ್ಲಿ ಎರಡೂ ಕಡೆ ಸೇರಿ 30 ಸದಸ್ಯರು ಹಾಜರಿದ್ದ ಕಾರಣ ಬೇಸರ ವ್ಯಕ್ತಪಡಿಸಿದ ಅವರು, ಚುನಾವಣೆಯ ದೃಷ್ಟಿಯಿಂದ ಸಂಸದೀಯ ವ್ಯವಸ್ಥೆಯನ್ನು ಕಡೆಗಣಿಸಬಾರದು ಎಂದು ಹೇಳಿದರು.

ಎಲ್ಲರಿಗೂ ಚುನಾವಣೆಯಲ್ಲಿ ಒಳ್ಳೆಯದಾಗಲಿ. ಈ ವ್ಯವಸ್ಥೆಯ ಬಗ್ಗೆ ಜನರಿಗೆ ಹೆಚ್ಚು ವಿಶ್ವಾಸ ಮೂಡುವಂತೆ, ವ್ಯವಸ್ಥೆಗೆ ಹೆಚ್ಚು ಶಕ್ತಿ ತುಂಬುವ ರೀತಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸದನಕ್ಕೆ ಆಗಮಿಸಿ ಕಲಾಪದಲ್ಲಿ ಭಾಗಿಯಾಗಬೇಕು. ಇದಕ್ಕಿಂತ ಹೆಚ್ಚು ಹೇಳುವುದಿಲ್ಲ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next