Advertisement

ಅಂಕೋಲಾ: ಹಿರಿಯ ಕಾರ್ಯಕರ್ತರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

07:37 PM Dec 29, 2021 | Team Udayavani |

ಅಂಕೋಲಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಅಂಕೋಲಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಜನಸಂಘದ ಹಿರಿಯ ಕಾರ್ಯಕರ್ತ ಅಶೋಕ ಮಹಾಲೆ ಅವರ ಹೊಟೇಲಿಗೆ ಭೇಟಿ ನೀಡಿ ಕರೆ ಲಾಡು- ಚಹ ಸೇವಿಸಿ ಸರಳತೆಗೆ ಸಾಕ್ಷಿಯಾದರು.

Advertisement

ವಿಶ್ವೇಶ್ವರ ಹೆಗಡೆ ಅವರು  ಪ್ರಥಮ ಬಾರಿ ಶಾಸಕರಾಗಿದ್ದು ಅಂಕೋಲಾ ಕ್ಷೇತ್ರದಿಂದ ಎನ್ನುವುದು ಗಮನಾರ್ಹ.

ನಂತರ ಒಮ್ಮೆ ಆಯ್ಕೆ ಆದವರು ಮತ್ತೊಮ್ಮೆ ಆಯ್ಕೆ ಆಗುವುದಿಲ್ಲ ಎಂಬ ಅಂಕೋಲಾ ಕ್ಷೇತ್ರದ ಪ್ರತೀತಿ ಬದಲಿಸಿ ಮೂರು ಬಾರಿ ಆಯ್ಕೆ ಆಗಿ ದಾಖಲೆ ಬರೆದಿದ್ದಾರೆ. ಈ ಆಯ್ಕೆಗೆ ಸಹಕರಿಸಿದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾದ ಅಶೋಕ ಮಹಾಲೆ ಅವರನ್ನು ನೆನಪಿಸಿಕೊಂಡು ಈಗ ಕಾರವಾರ ರಸ್ತೆಯಲ್ಲಿರುವ ಪುಟ್ಟ ಹೊಟೇಲ್‌ಗೆ ಭೇಟಿ ನೀಡಿ ಕುಶಲೋಪಚರಿ ವಿಚಾರಿಸಿದರು.

ಅದೇ ರೀತಿ ಕಿತ್ತೂರು ಚೆನ್ನಮ್ಮಾ ರಸ್ತೆಯಲ್ಲಿರುವ ಇನ್ನೋರ್ವ ಹಿರಿಯ ರಾಮಚಂದ್ರ ನಾಯ್ಕ ಅವರ ಅಂಗಡಿಗೂ ಹೋಗಿ ಅವರ ಆರೋಗ್ಯ ವಿಚಾರಿಸಿದರು.

ನಾಮಧಾರಿ ದಹಿಂಕಾಲ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Advertisement

ಪ್ರಮುಖರಾದ ಸಾಯಿ ಕಿರಣ ಶೇಟಿಯಾ, ಭಾಸ್ಕರ ನಾರ್ವೇಕರ್, ಸಂಜಯ ನಾಯ್ಕ, ನಾಗೇಂದ್ರ ನಾಯ್ಕ , ನಾಗೇಶ ನಾಯ್ಕ, ರಾಜು ನಾಯ್ಕ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next