Advertisement

ಪಾಲಿಕೆ ಸದಸ್ಯರಿಗೆ ಯಡಿಯೂರಪ್ಪ ಕ್ಲಾಸ್‌

03:20 PM Aug 05, 2018 | |

ಬೆಂಗಳೂರು: ನಗರ ಕಾರ್ಯಕಾರಿಣಿಯಲ್ಲಿ ನಗರದ ಪಾಲಿಕೆ ಸದಸ್ಯರು ಹಾಗೂ ಶಾಸಕರಿಗೆ ಕ್ಲಾಸ್‌ ತೆಗೆದಕೊಂಡ ಯಡಿಯೂರಪ್ಪ,  ಸ್ವಂತ ಬೆಳವಣಿಗೆ ಬಿಟ್ಟು ಪಕ್ಷ ಸಂಘಟನೆ ಬಲವರ್ಧನೆಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಗರ ಜಿಲ್ಲೆ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.

Advertisement

ಬಿಬಿಎಂಪಿ ಸದಸ್ಯರು ಹಾಗೂ ಶಾಸಕರು ಎಷ್ಟು ದುಡಿದಿದ್ದಾರೆ ಎಂದು ಪ್ರಶ್ನಿಸಿದರಲ್ಲದೆ,  ಪಾಲಿಕೆ ಸದಸ್ಯರಾಗಿ  ತಮ್ಮ ಅಭಿವೃದ್ಧಿಯನ್ನು ಮಾತ್ರ ಮಾಡಿಕೊಂಡವರು ಎಷ್ಟೇ ಶ್ರೀಮಂತರಾಗಿರಲಿ, ಬಲಾಡ್ಯರಾಗಿರಲಿ ಯಾವುದೇ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ. ಮೋಹನ್‌, ವಿಧಾನಪರಿಷತ್‌ ಸದಸ್ಯರಾದ ಎನ್‌. ರವಿಕುಮಾರ್‌, ಅ. ದೇವೇಗೌಡ, ಶಾಸಕರಾದ ಎಸ್‌.ಆರ್‌. ವಿಶ್ವನಾಥ್‌, ಎ. ರಘು, ಪೂರ್ಣಿಮಾ ಶ್ರೀನಿವಾಸ್‌, ನಗರ ಜಿಲ್ಲಾ ಅಧ್ಯಕ್ಷ ಮುನಿರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next