Advertisement

ಸ್ಟಾರ್ ಏರ್ ಲೈನ್ ಸಂಸ್ಥೆಯಿಂದ ಪತ್ರಕರ್ತರಿಗೆ ವಿಶೇಷ ರಿಯಾಯಿತಿ ಘೋಷಣೆ

04:08 PM Apr 28, 2022 | Team Udayavani |

ಬೆಳಗಾವಿ: ಸ್ಟಾರ್ ಏರ್ ಲೈನ್ ಸಂಸ್ಥೆಯಿಂದ ಪತ್ರಕರ್ತರಿಗೆ ವಿಶೇಷ ರಿಯಾಯಿತಿ ಘೋಷಣೆ ಮಾಡಲಾಗಿದೆ. ಕರ್ನಾಟಕದೊಳಗೆ ಸಂಚರಿಸುವ ವಿಮಾನ ದರದಲ್ಲಿ ಶೇ.20ರಷ್ಟು ರಿಯಾಯಿತಿ ನೀಡುವುದಾಗಿ ಸ್ಟಾರ್ ಏರ್ ಲೈನ್ಸ್ ಸಂಸ್ಥಾಪಕ ಸಂಜಯ್ ಘೋಡಾವತ್ ಬೆಳಗಾವಿಯಲ್ಲಿ ಘೋಷಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬಂದ ಸಂಜಯ್ ಘೋಡಾವತ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿಗೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ:ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ತಾಪಮಾನ, ಹಲವೆಡೆ 45 ಡಿಗ್ರಿ ಸೆಲ್ಸಿಯಸ್ ತಾಪಮಾನ

ಮನವಿಗೆ ಸ್ಪಂದಿಸಿದ ಘೋಡಾವತ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿರುವ ಎಲ್ಲ ಮಾನ್ಯತೆ ಪಡೆದ ಪತ್ರಕರ್ತರಿಗೆ ಈ ರಿಯಾಯಿತಿ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next