Advertisement

ಚರ್ಮ ಕುಶಲಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ: ಗೋವಿಂದ ಕಾರಜೋಳ

02:01 PM May 08, 2020 | keerthan |

ಬೆಂಗಳೂರು: ಕೋವಿಡ್ 19ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿ  ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ ( ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

Advertisement

11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ.  ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಈ ವಿಶೇಷ ಪ್ಯಾಕೇಜ್ ನಿಂದ ಚರ್ಮಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ   ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಡಿಸಿಎಂ  ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next