Advertisement

ವಿಶೇಷ ಪ್ಯಾಕೇಜ್‌ ಘೋಷಣೆ ಸ್ವಾಗತಾರ್ಹ

05:07 AM May 17, 2020 | Lakshmi GovindaRaj |

ಕೊಳ್ಳೇಗಾಲ: ಕೊರೊನಾ ವೈರಸ್‌ನಿಂದ ಸಂಕಷ್ಟದಲ್ಲಿರುವ ಜನರ ಕಲ್ಯಾಣಕ್ಕಾಗಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿರುವುದನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ  ಅಭಿನಂದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ಅನುದಾನವನ್ನು ವಿಶೇಷ ಪ್ಯಾಕೇಜ್‌ ಆಗಿ ಘೋಷಣೆ ಮಾಡಿರುವುದು ಐತಿಹಾಸಿಕ ತೀರ್ಮಾನ ಎಂದು ಪ್ರಶಂಸಿಸಿದರು.

Advertisement

ಪ್ರಧಾನಿ ನರೇಂದ್ರ  ಮೋದಿ ಕೈಗಾರಿಕೆ, ಮಧ್ಯಮ ಕೈಗಾರಿಕೆ, ಗುಡಿಕೈಗಾರಿಕೆ ಸೇರಿದಂತೆ ವ್ಯವಸಾಯ, ಹೈನುಗಾರಿಕೆ, ಸಂಘಟಿತ, ಅಸಂಘಟಿತ ಕಾರ್ಮಿಕರಿಗೂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ ಎಂದರು. ಬಿಜೆಪಿ ಟೌನ್‌ ಅಧ್ಯಕ್ಷ ಲಕ್ಷ್ಮೀಪತಿ, ಜಿಲ್ಲಾ ಮೋರ್ಚಾ ಅಧ್ಯಕ್ಷ ನಟರಾಜು, ಗ್ರಾಮಾಂತರ ಅಧ್ಯಕ್ಷ ಲೋಕೇಶ್‌, ಪರಮೇಶ್‌, ಕವಿತಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next