Advertisement

ಗ್ರಾಮೀಣಾಭಿವೃದ್ಧಿಗೆ ವಿಶೇಷ ಆದ್ಯತೆ

01:32 PM Feb 12, 2020 | Suhan S |

ಹಾನಗಲ್ಲ: ಗ್ರಾಮೀಣಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಳಜಿಯಿಂದ ಕೆಲಸ ಮಾಡುತ್ತಿದ್ದು, ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಲು ಗ್ರಾಮೀಣ ಪ್ರದೇಶದ ಜನತೆ ಮುಂದಾಗಬೇಕು ಎಂದು ಶಾಸಕ ಸಿಎಂ.ಉದಾಸಿ ಕರೆ ನೀಡಿದರು.

Advertisement

ತಾಲೂಕಿನ ಮಹಾರಾಜಪೇಟೆಯಲ್ಲಿ ನಡೆಸಿದ ಜನಸ್ಪಂದನ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ಸರಕಾರದ ಯೋಜನೆಗಳ ಅರಿವು ಪಡೆಯಬೇಕು. ಆಮೂಲಕ ತಮಗೆ ಬರಬೇಕಾದ ಸೌಲಭ್ಯಗಳನ್ನು ಪಡೆಯಲು ಸಾಧ್ಯ. ಈಗ ಎಲ್ಲವೂ ಪಾರದರ್ಶಕವಾಗಿ ನಡೆಯಲು ಸರಕಾರ ಯೋಜನೆಗಳನ್ನು ರೂಪಿಸಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ತಲುಪಬೇಕು. ಎನ್‌ ಆರ್‌ಇಜಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಇದರ ಲಾಭಕ್ಕೆ ಸಿದ್ಧರಾಗಿರಿ. ಗ್ರಾಮಗಳನ್ನು ಸುಂದರಗೊಳಿಸಿಕೊಳ್ಳಿ ಎಂದರು.

ತಾಲೂಕು ತಹಶೀಲ್ದಾರ್‌ ಪಿ.ಎಸ್‌.ಎರ್ರಿಸ್ವಾಮಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಮೂಲಕ ಎಲ್ಲ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ಸರಿಯಾಗಿ ತಲುಪಲು ಸಹಕಾರಿಯಾಗುತ್ತವೆ. ಎಲ್ಲ ಅಧಿಕಾರಿಗಳು ಇಲ್ಲಿ ಪಾಲ್ಗೊಳ್ಳುವುದರಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿದೆ. ಇಲ್ಲಿ ಯಾವುದೇ ಭೇದಕ್ಕೆ ಅವಕಾಶವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಉದ್ದೇಶವಿದೆ. ಬಡವರು, ರೈತರು, ಕೂಲಿಕಾರರು, ವಿವಿಧ ಉದ್ಯೋಗಿಗಳ ಸಮಸ್ಯೆಗಳಿಗೂ ಇಲ್ಲಿ ಪರಿಹಾರಗಳಿವೆ. ತಾಲೂಕು ಮಟ್ಟದ ಅಧಿಕಾರಿಗಳು ಕೂಡ ಇಲ್ಲಿ ಪಾಲ್ಗೊಳ್ಳುವುದರಿಂದ ಸಾರ್ವಜನಿಕರು ಇಲ್ಲಿಯೇ ತಮ್ಮ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಗ್ರಾಪಂ ಅಧ್ಯಕ್ಷೆ ನಿರ್ಮಲಾ ಅಕ್ಕಿ, ಶಶಿಧರ ಗೌಡರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣನವರ, ತಾಪಂ ಮಾಜಿ ಅಧ್ಯಕ್ಷ ಚಂದ್ರಣ್ಣ ಹರಿಜನ, ಶಿವಲಿಂಗಪ್ಪ ತಲ್ಲೂರ, ಹಸನಸಾಬ ಮುಲ್ಲಾ, ಬಸವರಾಜ ಬೈಲಣ್ಣನವರ, ಶಿವಪ್ಪ ಶಿರಹಟ್ಟಿ, ಸಮಾಜ ಕಲ್ಯಾಣ ಇಲಾಖೆ ಆಧಿಕಾರಿ ಜಿ.ಬಿ.ಹಿರೇಮಠ, ಹೆಸ್ಕಾಂ ಅಧಿಕಾರಿ ಜಿಂಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌. ಶ್ರೀನಿವಾಸ, ಬಿಸಿಎಂ ಅಧಿಕಾರಿ ಎಸ್‌.ಆನಂದ, ತೋಟಗಾರಿಕೆ ಇಲಾಖೆ ಅಧಿಕಾರಿ ಮಂಜುನಾಥ ಬಣಕಾರ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next