Advertisement

ಹತ್ತು ಮೆಟ್ಟಿಲು ಹತ್ತಲು ಹತ್ತು ಅಂಶ

01:07 PM Nov 25, 2019 | Suhan S |

ಗದಗ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಬರೋಬ್ಬರಿ ಒಂದು ದಶಕದಷ್ಟು ಹಿನ್ನಡೆದಿದೆ. 2013, 2014ರಲ್ಲಿ ಕ್ರಮವಾಗಿ ಗರಿಷ್ಠ ಶೇ.81.85ರಷ್ಟು ಅಂಕಗಳಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆ, ಕಳೆದ 2-3 ವರ್ಷಗಳಿಂದ ಪಾತಾಳದತ್ತ ಜಾರುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಂಡಾಗ ಕೇಳಿ ಬಂದ ಸುಧಾರಣೆಯ ಮಾತುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಅದಕ್ಕೀಗ ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಬಿಸಿ ಮುಟ್ಟಿಸಿದ್ದಾರೆ. ಜಿಪಂ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಫಲಿತಾಂಶವನ್ನು ಮೇಲೆತ್ತಲು ಹಲವು ಕಾರ್ಯಕ್ರಮಗಳ ಕ್ರಿಯಾ ಯೋಜನೆ ರೂಪಿಸಲಾಗಿದೆ.

Advertisement

ಕಳೆದ ಏಪ್ರಿಲ್‌ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡು, ಶೇ.74.05ರಷ್ಟು ಅಂಕಗಳೊಂದಿಗೆ ರಾಜ್ಯಮಟ್ಟದ ಶ್ರೇಣಿಯಲ್ಲಿ 31ನೇ ಸ್ಥಾನಕ್ಕೆ ಕುಸಿದಿತ್ತು. ಫಲಿತಾಂಶ ಪ್ರಕಟಗೊಂಡ ದಿನವೇ ಡಿಡಿಪಿಐ ಎನ್‌.ಎಚ್‌. ನಾಗೂರು ಸುಮಾರು 20 ಅಂಶಗಳ ಕಾರ್ಯಕ್ರಮ ಪ್ರಕಟಿಸಿದ್ದರು. ಆರಂಭದಲ್ಲಿ ಅವು ಜಾರಿಗೊಂಡಂತೆ ಕಂಡು ಬಂದರೂ, ನಂತರದ ದಿನಗಳಲ್ಲಿ ಅದೇ ಹಾಡು, ಅದೇ ರಾಗ ಎನ್ನುವಂತಾಗಿದೆ ಎಂಬ ಮಾತು ಶಿಕ್ಷಕರ ವಲಯದಲ್ಲೇ ಕೇಳಿ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಶನಿವಾರ ಸಂಜೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಇಲಾಖೆ ಕಾರ್ಯವೈಖರಿಗೆ ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಧ್ಯಕ್ಷರ ಸಮ್ಮುಖದಲ್ಲೇ, ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ರೂಪರೇಷಗಳನ್ನು ಸಿದ್ಧಗೊಳಿಸಿದ್ದಾರೆ. ಈ ಮೂಲಕ ಪ್ರಾಥಮಿಕ ಶಿಕ್ಷಣವನ್ನೂ ಬಲ ಪಡಿಸುವ ನಿಟ್ಟಿನಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ.

ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮಗಳೇನು?: ಈಗ ನಡೆಯುತ್ತಿರುವ ಪಾಕ್ಷಿಕ ಪರೀಕ್ಷೆ, ಫೋನ್‌ ಇನ್‌ ಕಾರ್ಯಕ್ರಮ, ವಿಷಯವಾರು ಸೆಮಿನಾರ್‌, ರಸಪ್ರಶ್ನೆ ಕಾರ್ಯಕ್ರಮ ಮುಂದುವರಿಕೆ. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಸಿಕ ತಮ್ಮ ವ್ಯಾಪ್ತಿಯ ಸರಕಾರಿ ಶಾಲೆಯೊಂದರಲ್ಲಿ ವಾಸ್ತವ್ಯ ಮಾಡುವುದು ಕಡ್ಡಾಯ. ಆಯಾ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಶಿಕ್ಷಣ ಮಟ್ಟವನ್ನು ಪರಿಶೀಲಿಸಿ, ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು. ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳು, ಪಾಲಕರಿಗೆ ಮನವರಿಕೆ ಮಾಡುವುದು.

ಪ್ರತಿದಿನ ವಿಶೇಷ ತರಗತಿಗಳು, ಗುಂಪು ಅಧ್ಯಯನ ನಡೆಸಬೇಕು. ಹೋಬಳಿ ಮಟ್ಟದಲ್ಲಿ ಮಕ್ಕಳ ಜೊತೆಗೆ ಸಂವಾದ ನಡೆಸಬೇಕು. 16-11-2019 ರಿಂದ ಆರಂಭಿಸಲಾದ ನಿಧಾನ ಗತಿಯ ಮಕ್ಕಳಿಗೆ ಪ್ರತಿದಿನ ಮಧ್ಯಾಹ್ನ 3.30 ರಿಂದ 5.30 ರ ವರೆಗೆ ಎರಡು ಗಂಟೆ ಅವ ಗೆ ಬರವಣಿಗೆ ಕಲೆ ರೂಢಿಸುವುದು. 16-12-2019 ರಂದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರೀಕ್ಷೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಬೇಕು ಎಂದು ನಿರ್ದೇಶಿಸಿದರು. ಬಿಇಒ ಅವರು ಪ್ರತಿ ವಾರ ಫಲಿತಾಂಶದಲ್ಲಿ ಹಿಂದುಳಿದ ನಾಲ್ಕು ಹೈಸ್ಕೂಲ್‌ ಭೇಟಿ ನೀಡಿ, 10ನೇ ತರಗತಿ ಮಕ್ಕಳ ಕಲಿಕಾ ಪ್ರಗತಿ ಅವಲೋಕಿಸಿ ವರದಿ ನೀಡಬೇಕು.

ಪ್ರತಿ ತಿಂಗಳಿಗೊಮ್ಮೆ ಡಿಡಿಪಿಐ ಅವರು ಬಿಇಒ ಅವರ ಸಭೆ ನಡೆಸಿ, ಪ್ರಗತಿ ಅವಲೋಕಿಸಬೇಕು. ಫೆಬ್ರವರಿ-2020ರ ಮೊದಲ ವಾರದಲ್ಲಿ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಒಂದು ಪರೀಕ್ಷೆ ನಡೆಸಿ, ಮಕ್ಕಳಲ್ಲಿರುವ ಪರೀಕ್ಷಾ ಭಯವನ್ನು ನಿವಾರಿಸಬೇಕು ಎಂದು ಸೂಚಿಸಿದೆ. ಡಿ.1 ರಿಂದ ಓದಿನ ಮನೆ ಸ್ಥಾಪಿಸಿ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಮನೆಗಳಲ್ಲಿ ಓದಲು ಅವಕಾಶ ಇಲ್ಲದವರು ಸಂಜೆ 6 ರಿಂದ ರಾತ್ರಿ 9 ಗಂಟೆ ವರೆಗೆ ಪ್ರತಿ ಗ್ರಾಮದ ಪ್ರಾಥಮಿಕ ಅಥವಾ ಪ್ರೌಢ ಶಾಲೆಯಲ್ಲಿ (ಬಾಲಕರು ಮಾತ್ರ) ಒಂದು ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ ಮಾಡಲಾಗುವುದು.

Advertisement

 

-ವಿಶೇಷ ವರದಿ

Advertisement

Udayavani is now on Telegram. Click here to join our channel and stay updated with the latest news.

Next